ಕಿಡಿಗೇಡಿಗಳ ಕೃತ್ಯ : ಮೈಸೂರಿನ ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮ….!
ಕಿಡಿಗೇಡಿಗಳ ಕೃತ್ಯಕ್ಕೆ ಹತ್ತಾರು ಎಕರೆಯ ಕಿರುಅರಣ್ಯ ಪ್ರದೇಶ ಭಸ್ಮವಾದ ಘಟನೆ ಮೈಸೂರಿನ ನಂಜನಗೂಡು ತಾಲೂಕು ಕೋಣನೂರು ಗ್ರಾಮದಲ್ಲಿ ನಡೆದಿದೆ.
ನಿನ್ನೆ ಸಂಜೆ ವೇಳೆಗೆ ಅರಣ್ಯಕ್ಕೆ ಬೆಂಕಿ ಬಿದ್ದು ಹೊತ್ತಿ ಉರಿದಿದೆ. ಎರಡು ಕಡೆಗಳಲ್ಲಿ ದುಷ್ಕರ್ಮಿಗಳು ಬೆಂಕಿ ಇಟ್ಟಿದ್ದು, ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
ಪ್ರಾಣಿ ಪಕ್ಷಿಗಳು ಬೆಂಕಿಯಿಂದ ತಪ್ಪಿಸಿಕೊಳ್ಳಲು ದಿಕ್ಕಾಪಾಲಾಗಿ ಓಡುವ ದೃಶ್ಯಗಳು ಮನಕಲುಕಿಸಿದೆ.