ಡಿಸಿಎಂ ಆದ ಬಳಿಕ ಮೊದಲ ಬಾರಿಗೆ ಸ್ವಜಿಲ್ಲೆಗೆ ಭೇಟಿ ನೀಡಲಿರೋ ಸಚಿವ ಗೋವಿಂದ ಕಾರಜೋಳ….
ಡಿಸಿಎಂ ಆದ ಬಳಿಕ ಸಚಿವ ಗೋವಿಂದ ಕಾರಜೋಳ ಮೊದಲ ಬಾರಿಗೆ ಸ್ವಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಇಂದಿನಿಂದ ಮೂರುದಿನ ಸ್ವಜಿಲ್ಲೆ ಪ್ರವಾಸ ಮಾಡುತ್ತಿದ್ದಾರೆ. ಪ್ರವಾಸ ವೇಳೆ ಪ್ರವಾಹ ಸಂಬಂಧ ಸಭೆ, ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಇಂದು ಬೆಳಿಗ್ಗೆ 9:20ಕ್ಕೆ ಬೆಂಗಳೂರಿನಿಂದ ವಿಮಾನ ಮೂಲಕ ಹುಬ್ಬಳ್ಳಿಗೆ ಹಾರಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬಾಗಲಕೋಟೆಗೆ ಆಗಮಿಸಲಿರೋ ಡಿಸಿಎಂ ಗೋವಿಂದ ಕಾರಜೋಳ, ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವಾಹ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ಮುಧೋಳದಲ್ಲಿ ವಾಸ್ತವ್ಯ ಹೂಡಲಿದ್ದಾರೆ.