ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು – ಸ್ಥಳಕ್ಕೆ ಇತಿಹಾಸ ತಜ್ಞರ ಭೇಟಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಯಲ್ಲಿ ಬಿರುಕು ಹಿನ್ನೆಲೆ ಪ್ರತಿಮೆ ಸ್ಥಳಕ್ಕೆ ಇತಿಹಾಸ ತಜ್ಞ ಡಾ.ರಂಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ತಜ್ಞರು, ಕಲ್ಲಿನಲ್ಲಿರುವ ದೋಷದಿಂದ ಸಣ್ಣ ಪ್ರಮಾಣದ ಬಿರುಕು ಪ್ರತಿಮೆಯಲ್ಲಿ ಕಂಡಿದೆ. ನಗರ ಪ್ರಮುಖ ವೃತ್ತ ಇದಾಗಿರೋದ್ರಿಂದ ಇಲ್ಲಿ ವಾಹನ ದಟ್ಟಣೆ ಹೆಚ್ಚು. ಇದ್ರಿಂದಾಗಿ ಕಾರ್ಬನ್ ಡೈಆಕ್ಸೈಡ್, ಮಾನಾಕ್ಸೈಡ್ ಇದೇಲ್ಲಾ ಸೇರಿ ಶಿಲ್ಪ ಹಾಳಾಗ್ತಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಜೊತೆಗೆ ಪ್ರಮೆಯಲ್ಲಿ ಕತ್ತಿಗೆ ಬಳಸಿರುವ ಶಿಲೆ ಉತ್ತಮ ಗುಣಮಟ್ಟದ್ದಲ್ಲ. ಈಗಾಗಿ ಪದೇ ಪದೇ ಅದು ಹಾಳಾಗುತ್ತಿದೆ. ಸದ್ಯ ಪ್ರತಿಮೆಗೆ ಸಣ್ಣ ಪ್ರಮಾಣದ ಬಿರುಕು ಇರುವುದರಿಂದ ಹೆಚ್ಚಿನ ಆತಂಕ ಇಲ್ಲ. ಬೇಸಿಗೆಯಲ್ಲಿ ಇದರ ಬಗ್ಗೆ ಹೆಚ್ಚು ಆತಂಕ ಇಲ್ಲ. ಆದರೆ ಮಳೆಗಾಲಕ್ಕೆ ಹೆಚ್ಚು ತೊಂದರೆ ಆಗುತ್ತೆ. ಹೀಗಾಗಿ ಮಳೆಗಾಲದ ಹೊತ್ತಿಗೆ ಪ್ರತಿಮೆ‌ ಸಂರಕ್ಷಣೆ ಮಾಡಿದರೆ ಒಳಿತು ಎಂದು  ಪುರಾತತ್ವ ತಜ್ಞ ಫ್ರೊ.ರಂಗರಾಜು ಅಭಿಪ್ರಾಯ ಪಟ್ಟಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights