ರೈಲ್ ಎಂಜಿನ್ ನಲ್ಲಿ ಬೆಂಕಿ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅಮಾಹುತ
ರೈಲ್ ಎಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ-ಪಡನೂರ ಮಧ್ಯೆ ನಡೆದಿದೆ.
ಹೌದು… ವಿಜಯಪುರದಿಂದ ಮಹಾರಾಷ್ಟ್ರದ ಸೋಲಾಪುರಕ್ಕೆ ಸಂಚರಿಸುತ್ತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಾಲಕ ಮಾರ್ಗ ಮಧ್ಯೆ ರೈಲು ಸಂಚಾರವನ್ನು ಸ್ಥಗಿತಗೊಳಿಸಿದ್ದಾನೆ.
ರೈಲು ತೆರಳುತ್ತಿದ್ದ ವೇಳೆ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಕಾಣಿಸಿಕೊಂಡಿದೆ. ವಿಚಾರ ತಿಳಿದ ಚಾಲಕ ತಕ್ಷಣ ರೈಲು ಮಾರ್ಗ ಮಧ್ಯೆ ನಿಲ್ಲಿಸಿ ಆಗುತ್ತಿದ್ದ ಭಾರೀ ಅನಾಹುತವನ್ನು ತಪ್ಪಿಸಿದ್ದಾನೆ. ಪ್ರಯಾಣಿಕರು ಸೇಫ್ ಆಗಿದ್ದು ಯಾರಿಗೂ ಕೂಡ ಯಾವುದೇ ಅಪಾಯ ಸಂಭವಿಸಿಲ್ಲ.