ವಿದ್ಯುತ್ ತಂತಿ ತುಳಿದು ಯುವಕ ಸಾವು : ನ್ಯಾಯಕ್ಕಾಗಿ ಕುಟುಂಬಸ್ಥರು ಒತ್ತಾಯ
ವಿದ್ಯುತ್ ತಂತಿ ತುಳಿದು ಯುವಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಗ್ರಾಮದ ಅಬ್ಬಳತಿ ಬಿ ಕಾಲೋನಿಯಲ್ಲಿ ನಡೆದಿದೆ.
ಮಂಜು ( 18 ) ಮೃತ ದುರ್ದೈವಿ. ಮಂಜು ಸಂಪಿಗೆಕಟ್ಟೆ ನಿವಾಸಿ. ಪಾಪಣ್ಣ ಅವರ ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿಯನ್ನು ನೋಡದೇ ತುಳಿದು ಬಾಲಕ ಸಾವನ್ನಪ್ಪಿದ್ದಾನೆ.
ಬಾಲಕನ್ನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ತಪ್ಪಿಕಸ್ಥರ ಶಿಕ್ಷೆಗೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸಿದ್ದು, ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.