ಸೆಣಬಿನ ಉದ್ಯಮಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ…
ಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದೆ. ಸಭೆಯಲ್ಲಿ ಮಹತ್ವದ ವಿಷ್ಯಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. 15 ನೇ ಹಣಕಾಸು ಆಯೋಗದ ಅವಧಿಯನ್ನು 12 ತಿಂಗಳು ವಿಸ್ತರಿಸಲು ನಿರ್ಧರಿಸಲಾಗಿದೆ. ಸೆಣಬಿನ ಉದ್ಯಮಕ್ಕೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಆರ್ಥಿಕ ನಷ್ಟದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಹಣಕಾಸು ಆಯೋಗದ ಅವಧಿಯನ್ನು 12 ತಿಂಗಳಿಗೆ ವಿಸ್ತರಿಸಲಾಗಿದೆ. ಹಣಕಾಸು ಆಯೋಗವು ಅಕ್ಟೋಬರ್ 30ರೊಳಗೆ ತನ್ನ ವರದಿಯನ್ನು ನೀಡಬೇಕಾಗಿತ್ತು. ಕೆಲ ದಿನಗಳ ಹಿಂದೆ ಸರ್ಕಾರ ಈ ದಿನಾಂಕವನ್ನು ನವೆಂಬರ್ 30ಕ್ಕೆ ಮುಂದೂಡಿಕೆ ಮಾಡಿತ್ತು.
ಎಲ್ಲಾ ಧಾನ್ಯಗಳ ಶೇಕಡಾ 100ರಷ್ಟು ಪ್ಯಾಕೇಜಿಂಗ್ನಲ್ಲಿ ಸೆಣಬಿನ ಚೀಲಗಳನ್ನು ಬಳಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಿಸಿಇಎ ಶೇಕಡಾ 100 ರಷ್ಟು ಧಾನ್ಯಗಳು ಮತ್ತು ಶೇಕಡಾ 20ರಷ್ಟು ಸಕ್ಕರೆಯನ್ನು ಸೆಣಬಿನ ಚೀಲಗಳಲ್ಲಿ ಕಡ್ಡಾಯವಾಗಿ ಪ್ಯಾಕ್ ಮಾಡಲು ಅನುಮೋದಿಸಿದೆ.
ಸರ್ಕಾರದ ಈ ನಿರ್ಧಾರದಿಂದ ಸೆಣಬಿನ ಉದ್ಯಮಕ್ಕೆ ಉತ್ತೇಜನ ಸಿಗಲಿದೆ. ಕಚ್ಚಾ ಸೆಣಬಿನ ಗುಣಮಟ್ಟ ಮತ್ತು ಉತ್ಪಾದಕತೆ ಹೆಚ್ಚಾಗಲಿದೆ. ಸೆಣಬಿನ ಉದ್ಯಮದಲ್ಲಿ ಸುಮಾರು 3.7 ಲಕ್ಷ ಜನರು ಕೆಲಸ ಮಾಡುತ್ತಾರೆ. ಲಕ್ಷಾಂತರ ರೈತ ಕುಟುಂಬಗಳು ತಮ್ಮ ಜೀವನೋಪಾಯಕ್ಕಾಗಿ ಸೆಣಬಿನ ಹೊಲಗಳನ್ನು ಅವಲಂಬಿಸಿವೆ. ಈ ಸಂಗತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಇದಲ್ಲದೆ ತ್ರಿಪುರ ವಿಮಾನ ನಿಲ್ದಾಣಕ್ಕಾಗಿ ಸೆರಿಮೋನಿಯಲ್ ಲೌಂಜ್ ಗೆ ಭೂಮಿ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ. ಸಿಕ್ಕಿಂ ಗಣಿಗಾರಿಕೆ ನಿಗಮದ ಬಾಕಿ ಇರುವ 4 ಕೋಟಿಗಿಂತ ಹೆಚ್ಚಿನ ಸಾಲ ಮರುಪಾವತಿ ಮತ್ತು ಬಡ್ಡಿಗೆ ವಿನಾಯಿತಿ ನೀಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.