5 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಪಿಡಿಓ….!
ಲಂಚ ಕೇಳಿ ಅಮಾಯಕರಿಗೆ ಮೋಸ ಮಾಡುವಂತ ಲಂಚಕೋರರಿಗೆ ಇತ್ತೀಚೆಗೆ ಎಸಿಬಿ ಅಧಿಕಾರಿಗು ಬಿಸಿ ಮುಟ್ಟಿಸುತ್ತಿದ್ದಾರೆ. ಮತ್ತೊಬ್ಬ ಅಧಿಕಾರ ಲಂಚ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆ.
ಹೌದು… ಪಿಡಿಓನೊಬ್ಬ ಜಮೀನು ವಿವಾದ ಸಂಬಂಧ ಕಾನೂನು ಹೋರಾಟಕ್ಕೆ ಮಹೇಶ್ ನಿಂದ ಲಂಚ ಕೇಳಿದ್ದ, ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರಿಗೆ ಸಿಕ್ಕಿಬಿದ್ದದ್ದಾನೆ. ದಾವಣಗೆರೆ ಮಳಲ್ಕೆರೆ ಗ್ರಾಮ ಪಂಚಾಯ್ತಿ ಪಿಡಿಓ ನಿಂಗಾಚಾರಿ ಎಂಬಾತನೇ ಎಸಿಬಿ ಬಲೆಗೆ ಬಿದ್ದ ವ್ಯಕ್ತಿ.
ಮಹೇಶ್ ಎಂಬಾತನಿಂದ 5 ಸಾವಿರ ಲಂಚ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾನೆ. ಈತನನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.