ಎಐಸಿಸಿ ಕಚೇರಿಯಲ್ಲಿ ಕೊರೊನಾ ಸೋಂಕು; ಕಾಂಗ್ರೆಸ್‌ ನಾಯಕರಲ್ಲಿ ಆತಂಕ!

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದ್ದು, ಕಾಂಗ್ರೆಸ್‌ ನಾಯಕರಲ್ಲಿ ಆತಂಕ ಸೃಷ್ಟಿಸಿದೆ.

ಕೊರೊನಾ ವಿಪತ್ತಿನ ನಿರ್ವಹಣೆಗಾಗಿ ಕಚೇರಿಯಲ್ಲಿರುವ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ಕೇಂದ್ರೀಯ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿತ್ತು. ಪ್ರತೀ ರಾಜ್ಯದ ವೈದ್ಯಕೀಯ ಇಲಾಖೆ ಸಿದ್ಧತೆ, ಸರ್ಕಾರ ಸಂಸ್ಥೆಗಳಿಂದ ನಡೆಯುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆಯೂ ವರದಿ ನೀಡಲಾಗಿತ್ತು. ಈ ವರದಿ ಪಡೆಯಲು ಕಂಟ್ರೋಲ್ ರೂಮ್ನಲ್ಲಿ ಹಲವರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಒಬ್ಬ ಸಿಬ್ಬಂದಿಗೆ ಕೊರೋನಾ ಪಾಸಿಟಿನ್‌ ಬಂದಿದೆ.

ಮಾರಕ ಕೊರೋನಾ ವೈರಸ್ ಈಗ ಎಐಸಿಸಿ ಸಿಬ್ಬಂದಿಗೂ ವಕ್ಕರಿಸಿದೆ. ಸದ್ಯ ಕೊರೋನಾ ಸೋಂಕಿತ ಎಐಸಿಸಿ ಸಿಬ್ಬಂದಿಗೆ ಆಸ್ಪತ್ರೆಯಲ್ಲಿ ಕೋವಿಡ್-19 ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಈತ ಕೆಲಸ ಮಾಡುತ್ತಿದ್ದ ಕಾರಣ ಈ ಎಐಸಿಸಿ ಕಚೇರಿಯನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.

ಇತ್ತೀಚೆಗೆ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿಗೆ ಸೋಂಕು ತಗುಲಿತ್ತು. ಕೋವಿಡ್-19 ಸೋಂಕು ದೃಢವಾಗುತ್ತಿದ್ದಂತೆಯೇ ಕಾಂಗ್ರೆಸ್ನ ವಕ್ತಾರ ಅಭಿಷೇಕ್ ಮನು ಸಿಂಘ್ವಿ ಹೋಮ್ ಕ್ವಾರಂಟೈನ್ಗೆ ಒಳಗಾದರು.
ಈ ಮುನ್ನ ಕಾಂಗ್ರೆಸ್ ವಕ್ತಾರ ಸಂಜಯ್ ಜಾ ಕೂಡ ಕೊರೋನಾ ಕಾಣಿಸಿಕೊಂಡಿತ್ತು. ಈ ಇಬ್ಬರೂ ಇತ್ತೀಚೆಗೆ ಎಐಸಿಸಿ ಕಚೇರಿಗೆ ಭೇಟಿ ನೀಡಿದ್ದರು ಎನ್ನಲಾಗಿದೆ. ಈ ಬೆನ್ನಲ್ಲೀಗ ಎಐಸಿಸಿ ಕಚೇರಿ ಸಿಬ್ಬಂದಿಗೆ ಕೊರೋನಾ ಕಾಣಿಸಿಕೊಂಡಿರುವು ಎಲ್ಲರಲ್ಲೂ ಆತಂಕ ಮೂಡಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights