ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಗಢ; ಐವರ ಸಾವು; ಹಲವರಿಗೆ ಗಾಯ!

ತಮಿಳುನಾಡಿನ ಕಡ್ಡಲೂರು ಬಳಿ ಇರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಚೆನ್ನೈನಿಂದ 190 ಕಿಮೀ ದೂರದಲ್ಲಿರುವ ಕಟ್ಟುಮನ್ನಾರ್ಕಾಯಿಲ್​ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಅವಗಢ ಸಂಭವಿಸಿದ್ದು,  ಸ್ಫೋಟಕ್ಕೆ ಕಾರಣವೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ. ಪ್ರಾಥಮಿಕ ತನಿಖೆ ಪ್ರಕಾರ ಕಾರ್ಖಾನೆಯಲ್ಲಿ ಸಂಭವಿಸಿದ ಶಾರ್ಟ್​ ಸರ್ಕ್ಯೂಟ್​ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಭಾಗ ಸಂಪೂರ್ಣ ನಾಶವಾಗಿದೆ. ಕಾರ್ಖಾನೆಯಲ್ಲಿದ್ದ ಪಟಾಕಿ ಮದ್ದುಗುಂಡುಗಳು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಅನೇಕರು ಮೃತಪಟ್ಟಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಪರಿಸ್ಥಿತಿ ಚಿಂತಾ ಜನಕವಾಗಿದೆ. ಹೀಗಾಗಿ, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೊರೊನಾ ಲಾಕ್‌ಡೌನ್‌ ತೆರವುಗೊಂಡಿರುವ ಹಾಗೂ ದೀಪಾವಳಿ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights