ಮಂಡ್ಯ ಅರ್ಚಕರ ಕೊಲೆ, ದರೋಡೆ ಪ್ರಕರಣ: 09 ಮಂದಿ ಆರೋಪಿಗಳ ಬಂಧನ
ಮಂಡ್ಯ ನಗರದ ಅರ್ಕೇಶ್ವರ ದೇವಸ್ಥಾನದಲ್ಲಿ ಮಲಗಿದ್ದ ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲೀಸರು ಇದೂವರೆಗೂ 09 ಆರೋಪಿಗಳನ್ನು ಬಂಧಿಸಿದ್ದಾರೆ.
ಮಂಡ್ಯ ಪೂರ್ವ ಠಾಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆಯ ಪೊಲೀಸರು ಕಳೆದ ವಾರ ಐವರನ್ನು ಬಂಧಿಸಿದ್ದರು. ನಿನ್ನೆ ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೆ, ಬಂಧಿತರಿಂದ 4.7 ಲಕ್ಷ ರೂಪಾಯಿ ನಗದು, 2 ಮೊಬೈಲ್, 2 ಬೈಕ್, 1 ವಾಹನವನ್ನು ಜಪ್ತಿ ಮಾಡಲಾಗಿದೆ.
ಮಂಡ್ಯದ ಗುತ್ತಲು ರಸ್ತೆಯಲ್ಲಿರುವ ಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ಕಳೆದ ವಾರ ಬೆಳಗ್ಗಿನ ಜಾವ ಹತ್ಯೆಗೈದು ಹುಂಡಿಯ ಹಣವನ್ನು ದರೋಡೆ ಮಾಡಲಾಗಿತ್ತು.
ಈ ಕೃತ್ಯದಲ್ಲಿ ಇನ್ನು ಹಲವರು ಭಾಗಿಯಾಗಿರುವ ಅನುಮಾನವಿದೆ. ಅವರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಳೆದ ಮೂರು ದಿನದ ಹಿಂದಷ್ಟೆ ಪೊಲೀಸರು ಐವರನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಮೂವರು ಅರ್ಚಕರ ಹತ್ಯೆ; ದೇವಾಲಯದ ಹಣ ದರೋಡೆ!