ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಸುತ್ತಮುತ್ತಲ ಗ್ರಾಮಸ್ಥರು

ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ 6 ತಿಂಗಳ ಗಂಡು ಚಿರತೆ ಬಿದ್ದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಅರಸನ ಬೆಟ್ಟದ ಅರಣ್ಯದಲ್ಲಿ ನಡೆದಿದೆ.

ಇತ್ತೀಚೆಗೆ ಆ ಭಾಗದಲ್ಲಿ ಸುತ್ತಮುತ್ತಲ ಗ್ರಾಮಗಳಿಗೆ ನುಗ್ಗಿ‌ ಚಿರತೆ ಉಪಟಳ ನೀಡುತ್ತಿತ್ತು. ಗ್ರಾಮಸ್ಥರು ಒತ್ತಾಯ ಮೇರೆಗೆ ಚಿರತೆ ಸೆರೆಗೆ ಬೋನ್ ಇಡಲಾಗಿತ್ತು.ಕಡೆಗೂ ಬೋನ್ ಗೆ ಚಿರತೆ ಬಿದ್ದಿರೋದಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರ.

ಸೆರೆ ಸಿಕ್ಕ ಚಿರತೆಯನ್ನು ಮಲೈ ಮಹದೇಶ್ವರ ಅರಣ್ಯಕ್ಕೆ ಬಿಡಲು ಅರಣ್ಯ ಇಲಾಖೆ ಅಧಿಕಾರಿಗಳು ಚಿಂತನೆ ನಡೆಸಿದ್ದು, ಸ್ಥಳಕ್ಕೆ ಬಂದು ವಾಹನದ ಮೂಲಕ ಬೋನಿನ ಸಮೇತ ಚಿರತ ರವಾನೆ ಮಾಡಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights