ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸಾಪ್ಟ್ ವೇರ್ ಉದ್ಯೋಗಿ…!
ಸಾಲ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ಬೇಸತ್ತು ಸಾಪ್ಟ್ ವೇರ್ ಉದ್ಯೋಗಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ75ರ ಚುಂಚದೇನಹಳ್ಳಿ ಬಳಿ ತಡರಾತ್ರಿ ನಡೆದಿದೆ.
ಬೆಂಗಳೂರಿನ ಮಹದೇವಪುರ ವಾಸಿಯಾಗಿದ್ದ ಪ್ರಶಾಂತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಬಿಹಾರ ಮೂಲದ ಪ್ರಶಾಂತ್ ಕುಮಾರ್ ರಿವಲ್ವಾರ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸಾಪ್ಟ್ ವೇರ್ ಉದ್ಯೋಗಿಯ ಪತ್ನಿಯೂ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದಳು.
ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಬೇಟಿ ಪರಿಶೀಲನೆ ನಡೆಸಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.