ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ವೈ? : ಗುಟ್ಟು ಬಿಟ್ಟುಕೊಟ್ಟ ಜೆಡಿಎಸ್ ಅನರ್ಹ ಶಾಸಕ
ಆಪರೇಷನ್ ಕಮಲ ಮಾಡಿದ್ದು ಬಿ.ಎಸ್.ಯಡಿಯೂರಪ್ಪ ಎಂದು ಜೆಡಿಎಸ್ ಅನರ್ಹ ಶಾಸಕ ನಾರಾಯಣಗೌಡ ಆಪರೇಷನ್ ಗುಟ್ಟು ಬಿಟ್ಟುಕೊಟ್ಟಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ಮಾತನಾಡಿದ ಅವರು ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡ ಅನರ್ಹ ಶಾಸಕ ನಾರಾಯಣಗೌಡ, ನನ್ನ ಕ್ಷೇತ್ರಕ್ಕೆ ಅನುದಾನ ಬಿಡುಗಡೆಯಾದ್ರೆ ಅದನ್ನ ಹಾಸನಕ್ಕೆ ತೆಗೆದುಕೊಂಡು ಹೋಗ್ತಿದ್ರು ಎಂದು ಹೇಳಿದ್ದಾರೆ.
ಯಡಿಯೂರಪ್ಪ ಸಿಎಂ ಆಗ್ತಿದ್ದಾರೆ ನಿಮ್ ಅಭಿಪ್ರಾಯ ಏನು ಎಂದು ಕೇಳಿದ್ರು. ಕೆಲವರು ಬಂದು ನನ್ನ ಯಡಿಯೂರಪ್ಪ ಅವರ ಮನೆಗೆ ಕರೆದುಕೊಂಡು ಹೋದ್ರು. ಐದು ಗಂಟೆ ಸುಮಾರಿಗೆ ನಾನು ಅವರ ಮನೆಗೆ ಹೋದೆ. ಆಗ ಅವರು ಏನಪ್ಪ ಮುಖ್ಯಮಂತ್ರಿಯಾಗೊ ಅವಕಾಶ ಇದೆ. ಬೆಂಬಲಿಸ್ತಿಯಾ? ನನ್ನ ತಂದೆ ವೀರಭದ್ರ ಸ್ವಾಮಿ ಪೂಜೆ ಮಾಡಿಕೊಂಡು ಬೆಳೆಸಿದ್ದಾರೆ.
ಆದರೆ ಕೆ.ಆರ್.ಪೇಟೆ ತಾಲೂಕು ಅಭಿವೃದ್ಧಿಯಾಗಿಲ್ಲ ಎಂದು ಸ್ವಪ್ನದಲ್ಲಿ ಬಂದು ಕಾಡುತ್ತಿದ್ದಾರೆ. ನೀನು ಕೈ ಜೋಡಿಸಿದ್ರೆ ಕೆ.ಆರ್.ಪೇಟೆ ಅಭಿವೃದ್ಧಿ ಮಾಡೋಣ. ಏನಂತೀಯ ಎಂದ್ರು. ಅದಕ್ಕೆ ನಾನು ತಾಲೂಕಿನ ಅಭಿವೃದ್ದಿಗಾಗಿ 7೦೦ ಕೋಟಿ ಅನುದಾನ ಕೇಳಿದ್ದೆ. ಆದ್ರೆ ಯಡಿಯೂರಪ್ಪನವರು ಸಾವಿರ ಕೋಟಿ ಕೊಡ್ತಿನಿ ಅಂದ್ರು. ಅದ್ರಂತೆ ನಮ್ಮ ತಾಲೂಕಿನ ಅಭಿವೃದ್ದಿಗೆ ಸಾವಿರ ಕೋಟಿ ಅನುದಾನ ಮಂಜೂರು ಮಾಡಿದ್ದಾರೆ.
ಆ ಮೂಲಕ ರಾಜೀನಾಮೆಗೂ ಮೊದಲು ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿದ್ದಾರೆ.