ಆಸ್ಪತ್ರೆಯಿಂದ ಮನೆಗೆ ಬಂದ ಮಾಜಿ CM: ಜೊತೆಯಾದವರೆಲ್ಲರೂ ಕೃತಜ್ಞ: ಸಿದ್ದರಾಮಯ್ಯ..

ಮನುಷ್ಯತ್ವವನ್ನು ಮೀರಿದ ಸಿದ್ಧಾಂತ ಜಗತ್ತಿನಲ್ಲೇ ಇಲ್ಲ. ಕಷ್ಟಕಾಲದಲ್ಲಿ ಜೊತೆಯಾದವರೆಲ್ಲರೂ ನಾನು ಕೃತಜ್ಞ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೃದಯಸಂಬಂಧಿ ಚಿಕಿತ್ಸೆ ಮುಗಿಸಿದ ನಂತರ ವೈದ್ಯರೊಡೆನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆದು ಮನೆಗೆ ಮರಳುತ್ತಿದ್ದೇನೆ. ಹಿಂದಿನಂತೆ ಕೆಲಸ ಕಾರ್ಯಗಳನ್ನು ಕೈಗೊಳ್ಳುವಷ್ಟು ನನ್ನ ಆರೋಗ್ಯ ಸದೃಢವಾಗಿದೆ. ಯಾವ ಆತಂಕವೂ ಬೇಡ. ನಾನು ಮೊದಲಿನಂತೆ ಸಕ್ರಿಯವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯಾದ್ಯಂತ ಅಭಿಮಾನಿಗಳು ನನ್ನ ಆರೋಗ್ಯ ಸುಧಾರಣೆಯಾಗುವಂತೆ ಹರಕೆ, ಪೂಜೆಗಳನ್ನು ಸಲ್ಲಿಸಿದ್ದಾರೆ, ಕೆಲವರು ಆಸ್ಪತ್ರೆಗೆ ಬಂದು ಪ್ರಸಾದವನ್ನೂ ನೀಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಕಂಡು ಮಾತು ಹೊರಡುತ್ತಿಲ್ಲ. ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು. ಜನಸೇವೆಯಲ್ಲಿರುವ ವ್ಯಕ್ತಿ ಇದಕ್ಕಿಂತ ಹೆಚ್ಚಿನದನ್ನು ಏನು ನಿರೀಕ್ಷಿಸಲು ಸಾಧ್ಯ? ಈ ವೇಳೆ ವಿವಿಧ ಸಮುದಾಯಗಳ ಮಠಾಧೀಶರು ಹಾಗೂ ಪಕ್ಷಾತೀತವಾಗಿ ಹಲವು ನಾಯಕರು ನನ್ನನ್ನು ಭೇಟಿಯಾಗಿ ಧೈರ್ಯತುಂಬಿ, ಗುಣಮುಖರಾಗುವಂತೆ ಹಾರೈಸಿದ್ದಾರೆ ಅವರೆಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights