ಕೆ.ಆರ್.ಪೇಟೆ ಉಪಚುನಾವಣೆ ಹೊಸ್ತಿಲ್ಲಲ್ಲಿ ಜೆಡಿಎಸ್ ಗೆ ಮತ್ತೊಂದು ಶಾಕ್….
ಮೈತ್ರಿಯಿಂದ ದೂರ ಉಳಿದು ಉಪಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದ ಜೆಡಿಎಸ್ ಗೆ ಮತ್ತೊಂದು ತೊಡುಕುಗಳು ಎದುರಾಗುತ್ಗಿತಲೇ ಇವೆ.
ಹೌದು.. ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಅನಾರೋಗ್ಯದಿಂದ ನಿಧನರಾಗಿದ್ದ ಸುದ್ದಿ ಕೆ.ಆರ್.ಪೇಟೆ ಉಪಚುನಾವಣೆ ಹೊಸ್ತಿಲ್ಲಲ್ಲಿ ಜೆಡಿಎಸ್ ಗೆ ಮತ್ತೊಂದು ಶಾಕ್ ಎದುರಾಗಿದಂತಾಗಿದೆ.
ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿದ್ದ ಆರ್.ವೆಂಕಟಸುಬ್ಬೇಗೌಡ(೬೫) ನಿಧನರಾಗಿದ್ದಾರೆ. ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸುತ್ತೇನೆಂದು ಪಣತೊಟ್ಟಿದ್ದ ತಾಲೂಕು ಅಧ್ಯಕ್ಷ ವೆಂಕಟಸುಬ್ಬೇಗೌಡ ಮಾಜಿ ಸಿ.ಎಂ. ಕುಮಾರಸ್ವಾಮಿ ಗೆ ಆಪ್ತರಾಗಿದ್ದರು. ಸದ್ಯ ಅವರ ಅಗಲಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ನಾಳೆ ಕೆ.ಆರ್.ಪೇಟೆ ತಾಲೂಕಿನ ಅಗ್ರಹಾರ ಬಾಚಹಳ್ಳಿ ಗ್ರಾಮದಲ್ಲಿ ನಡೆಯಲಿರುವ ಅಂತ್ಯಕ್ರಿಯೆ ನಡೆಲಿದೆ.