ಕೈ ಹಿಡಿಯಲು ದಳಪತಿಗಳಿಗೆ ಗುಡ್ ಬೈ ಹೇಳ್ತಾರಾ ಅರಕಲಗೂಡು ಜೆಡಿಎಸ್ ಶಾಸಕ…?
ದಳಪತಿಗಳಿಗೆ ಕೈ ಕೊಡಲು ಸಿದ್ದರಾದ ಅರಕಲಗೂಡು ಜೆಡಿಎಸ್ ಶಾಸಕ ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಿದ್ದತೆ ನಡೆಸಿದ್ದಾರೆ.
ಹೌದು… ಜೆಡಿಎಸ್ ನ ಮತ್ತೋರ್ವ ಶಾಸಕ ದಳಪತಿಗಳಿಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ. ಅರಕಲಗೂಡು ಜೆಡಿಎಸ್ ಶಾಸಕ ಎಟಿ,ರಾಮಸ್ವಾಮಿ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ. ಈಗಾಗಲೇ ಎರಡು ಬಾರಿ ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿರುವ ಎಟಿ,ರಾಮಸ್ವಾಮಿ, ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಎಟಿ,ರಾಮಸ್ವಾಮಿ ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಸರ್ಕಾರದಿಂದ ಅಂತರ ಕಾಯ್ದುಕೊಂಡಿದ್ದರು. ಮಾಜಿ ಸಚಿವ ಎ,ಮಂಜು ಬಿಜೆಪಿ ಸೇರಿದ ಬೆನ್ನಲೆ ಎಟಿ,ರಾಮಸ್ವಾಮಿ ಕಾಂಗ್ರೆಸ್ ಸೇರಲು ಸಿದ್ದರಾಗಿದ್ದಾರೆ ಎನ್ನಲಾಗುತ್ತಿದೆ.