ಕೋಡಿಮಠದ ಶ್ರೀಗಳ ಮಾತು ನಿಜವಾದರೆ ಹೆಬ್ಬೆರೆಳು ಕೊಡುವುದಾಗಿ ಬಿಜೆಪಿ ಕಾರ್ಯಕರ್ತ ಸವಾಲ್!

ಮೊನ್ನೆಯಷ್ಟೆ ಇನ್ನು ಮೂರು ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದ  ಕೋಡಿಮಠದ ಶ್ರೀಗಳಿಗೆ ಮಂಡ್ಯದ ಬಿಜೆಪಿ ಕಾರ್ಯಕರ್ತ ಸವಾಲ್ ಹಾಕಿದ್ದಾರೆ. ನಿಮ್ಮ ಭವಿಷ್ಯದಂತೆ ಬಿಜೆಪಿ ಸರ್ಕಾರ ಪತನವಾದ್ರೆ ಹೆಬ್ಬೆಟ್ಟನ್ನ ಕಾಣಿಕೆಯಾಗಿ ಕೊಡುವುದಾಗಿ ಸವಾಲ್ ಹಾಕಿದ್ದಾರೆ.

ಮಂಡ್ಯದ ಬಿಜೆಪಿ ಕಾರ್ಯಕರ್ತ ಉಪ್ಪರಕನಹಳ್ಳಿಯ ಶಿವಕುಮಾರ್ ಆರಾಧ್ಯ ಕೋಡಿ ಶ್ರೀಗಳಿಗೆ ಸವಾಲ್ ಹಾಕಿದ್ದಾರೆ. ಭವಿಷ್ಯ ನಿಜವಾಗದಿದ್ರೆ ನಿಮ್ಮ ಮಠದ ಶಿಷ್ಯನಾಗಿ ಸ್ವೀಕರಿಸುವಂತೆ ಸ್ವಾಮೀಜಿಗೆ ಮನವಿ ಮಾಡಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರದಲ್ಲಿ ಕೋಡಿಮಠ ಶ್ರೀಗಳು ಸರ್ಕಾರದ ಭವಿಷ್ಯದ ಬಗ್ಗೆ ಹೇಳಿಕೆ ವಿಚಾರ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ , ಸರ್ಕಾರದ ಭವಿಷ್ಯ ನಿರ್ಧಾರ ಮಾಡೋದು ಜನ. ಜನರ ಆಶೀರ್ವಾದ ಇರುವ ವರೆಗೆ ಸರ್ಕಾರ ಇರುತ್ತೆ. ದೇಶದಲ್ಲಿ ಒಂದು ಕೋಟಿ ಸ್ವಾಮಿಜಿಗಳು ಜ್ಯೋತಿಷಿಗಳು ಇದ್ದಾರೆ. ಒಬ್ಬೊಬ್ಬರು ಒಂದೊಂದು ಭವಿಷ್ಯ ಹೇಳುತ್ತಾರೆ.. ಭವಿಷ್ಯಕ್ಕೆ ಬೆಲೆ ಕೊಡಬಾರದು. ಸರ್ಕಾರ ಅವಧಿ ಪೊರೈಸುತ್ತೆ, ಜನಪರ ಕೆಲಸ ಮಾಡುತ್ತದೆ. ಜೋತಿಷ್ಯ ಮೇಲೆ ಸರಕಾರ ನಿಂತಿಲ್ಲ ಎಂದಿದ್ದಾರೆ.

ಕೋಡಿ ಶ್ರೀಗಳು ಭವಿಷ್ಯ :-

ಬರುವ ದಿನಗಳಲ್ಲಿ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ. ಮತ್ತೆ ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಗಂಗೆಮಡುವಿನಲ್ಲಿ ಪರೋಕ್ಷವಾಗಿ ಭವಿಷ್ಯ ನುಡಿದಿದ್ದಾರೆ ಕೋಡಿ ಶ್ರೀಗಳು.

ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ಸಿದ್ದರಾಮಯ್ಯರಿಗೆ ನೀವು ರಾಜ್ಯದ ಗದ್ದುಗೆ ಹಿಡಿದಿದ್ದೀರಿ. ನೀವು ದೆಹಲಿಯ ಗದ್ದುಗೆ ಹಿಡಿಯಿರಿ ಎಂದು ಸಿದ್ದರಾಮಯ್ಯಗೆ ಸಲಹೆ ನೀಡುತ್ತಿದ್ದೇನೆ. ಹಾಲುಮತ ಸಮಾಜದವರು ಇಡೀ ಭಾರತದಾದ್ಯಂತ ಎಲ್ಲಾ ರಾಜ್ಯಗಳಲ್ಲಿ ನೆಲೆಸಿದ್ದಾರೆ.

ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು, ಸಿದ್ದು ಗದ್ದುಗೆ ಹಾಸೀತು ಎಂದು ಈ ಹಿಂದೆ ಹೇಳಿದ್ದೆ. ಆಗ ಸಿದ್ದರಾಮಯ್ಯ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲಾ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.

 

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights