ಡಿಕೆಶಿ ಜಾಮೀನು ವಿರೋಧಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ : ಕನಕಪುರ ಬಂಡೆಗೆ ಬಿಗ್ ರಿಲೀಫ್
ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿದ್ದ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದ ದೆಹಲಿ ಹೈಕೋರ್ಟ್ ನ ಕ್ರಮವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ ಅರ್ಜಿ ವಜಾ ಮಾಡಿದೆ.
ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್.ಎಫ್.ನಾರಿಮನ್ ನೇತೃತ್ವದ ದ್ವಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ. ಇತ್ತ ಕರ್ನಾಟಕ ಹೈಕೋರ್ಟ್ ನ್ಯಾ. ಅರವಿಂದ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಡಿ.ಕೆ.ಶಿವಕುಮಾರ್ ಅರ್ಜಿ ವಿಚಾರಣೆ ಆಗುವರೆಗೂ ಹೊಸ ಸಮನ್ಸ್ ನೀಡುವಂತಿಲ್ಲ ಎಂದು ಇಡಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ದೆಹಲಿ ಹೈಕೋರ್ಟ್ ಆದೇಶವನ್ನು ನ್ಯಾ. ರೋಹಿಂಗ್ಟನ್ ನಾರಿಮನ್ ಪೀಠ ಎತ್ತಿ ಹಿಡಿದಿದ್ದು, ಈ ಮೂಲಕ ಡಿಕೆಶಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.