ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
ಮಹಾರಾಷ್ಟ್ರ ರಾಜಕಾರಣವೀಗ ಶನಿವಾರ ಬೆಳಿಗ್ಗೆಯೇ ಸ್ಟೋಟಕ ತಿರುವು ಪಡೆದುಕೊಂಡಿದೆ. ಇದುವರೆಗೂ ಕಾಂಗ್ರೆಸ್-ಎನ್ಸಿಪಿ ಮತ್ತು ಶಿವಸೇನೆ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಶಿವಸೇನಾ ಮುಖ್ಯಸ್ಥ ಉದ್ಬವ್ ಠಾಕ್ರೆ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎನ್ನಲಾಗಿತ್ತು. ಆದರೀಗ ದಿಢೀರ್ ಬೆಳವಣಿಗೆಯಲ್ಲಿ ಎನ್ಸಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ರಚನೆಯಾಗಿದೆ. ದೇವೇಂದ್ರ ಪಡ್ನವೀಸ್ ಎರಡನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಲ್ಲದೇ ಎನ್ಸಿಪಿಯ ಅಜಿತ್ ಪವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ತೆಗೆದುಕೊಂಡಿದ್ಧಾರೆ.
ಶನಿವಾರ ಬೆಳಿಗ್ಗೆ ರಾಜಭವನದಲ್ಲಿ ನಡೆದ ಸರಳ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರ್ ಅವರು ಪ್ರಮಾಣ ವಚನ ಬೋಧಿಸಿದರು.
ಈ ಹಿಂದೆ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಶಿವಸೇನಾ-ಎನ್ಸಿಪಿ-ಕಾಂಗ್ರೆಸ್ ಪಕ್ಷಗಳು ಮಹಾ ಮೈತ್ರಿಕೂಟ ಸರ್ಕಾರ ರಚಿಸಲು ನಿರ್ಧರಿಸಿದ್ದವು. ನಿನ್ನೆ ಮೂರೂ ಪಕ್ಷಗಳ ಮುಖಂಡರು ಒಟ್ಟಾಗಿ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಿದ್ದರು. ಮೂರು ಪಕ್ಷಗಳ ಮುಖಂಡರು ಸಭೆ ನಡೆಸಿ ಚರ್ಚಿಸಿದ ಬಳಿಕವೇ ಈ ತೀರ್ಮಾನಕ್ಕೆ ಬಂದಿದ್ದರು. ಉದ್ಧವ್ ಠಾಕ್ರೆಯನ್ನು ಸಿಎಂ ಮಾಡಲು ಎಲ್ಲರೂ ಒಪ್ಪಿದ್ಧಾರೆನ್ನಲಾಗಿತ್ತು.