ಧಾರವಾಡ‌ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್ : ಬೆಚ್ಚಿ ಬಿದ್ದ ಜನ

ಧಾರವಾಡ‌ ಜಿಲ್ಲೆಯಲ್ಲಿ ಮತ್ತೊಮ್ಮ ಗುಂಡಿನ ಸದ್ದು ಕೇಳಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.

ಹೌದು.. ಧಾರವಾಡ‌ದಲ್ಲಿ ಮತ್ತೊಂದು ಶೂಟೌಟ್ ಪ್ರಕರಣ ಹೊರವಲಯದಲ್ಲಿ ನಡೆದಿದೆ.  ನಿಗದಿ ರಸ್ತೆಯಲ್ಲಿ ಕಾರಿನಲ್ಲಿ ಬರುತ್ತಿದ್ದವನ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ದಾಂಡೇಲಿ ಮೂಲದ ಶ್ಯಾಮ್(೪೦) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ದಾಂಡೇಲಿಯಿಂದ ಧಾರವಾಡಕ್ಕೆ ಬರುತ್ತಿದ್ದ ಶ್ಯಾಮ್ ನನ್ನು ಪಲ್ಸರ್ ಬೈಕ್ ಮೇಲೆ ಬಂದಿದ್ದ ಮೂವರು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights