ನ.4 ರಿಂದ ಮೋದಿಗೆ ಗಂಡಾಂತರ – ಮುಂದಿನ ಹತ್ತು ವರ್ಷದಲ್ಲಿ ಒಮ್ಮೆ ಡಿಕೆಶಿ ಸಿಎಂ : ಬ್ರಹ್ಮಾಂಡ ಗುರೂಜಿ ಭವಿಷ್ಯ
ನವೆಂಬರ್ 4 ರಿಂದ ಮೋದಿಗೆ ಗಂಡಾಂತರ ಇದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಹಾಸನಾಂಬೆ ದರ್ಶನ ಬಳಿಕ ಮಾತನಾಡಿದ ಬ್ರಹ್ಮಾಂಡ ಗುರೂಜಿ, ನವೆಂಬರ್ 4 ರಿಂದ ಮೋದಿಗೆ ಗಂಡಾಂತರ ಇದೆ ಎಂದಿದ್ದಾರೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡು ಮುಕ್ಕಾಲು ವರ್ಷ ಪ್ರಧಾನಿಯಾಗಿರ್ತಾರೆ. ಇಲ್ಲವಾದರೆ ಇಲ್ಲ.
ಯಾವುದೇ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲ್ಲ. ಮುಂದಿನ ದಿನಗಳಲ್ಲಿ ಪೂರ್ಣಾವಧಿ ಸರ್ಕಾರ ಬರಲಿದೆ. ಕೋಟಿ ಕೋಟಿ ಹಣ ಲೂಟಿ ಮಾಡಿದರು ಕೃಷ್ಣ ಜನ್ಮಸ್ಥಳಕ್ಕೆ ಹೋಗೋದು ಗ್ಯಾರಂಟಿ. ಜನರು ಎಚ್ಚರಿಕೆಯಿಂದ ಇರಲಿ. ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಸೇರಲೇ ಬೇಕು. ಮುಂದಿನ ಹತ್ತು ವರ್ಷದಲ್ಲಿ ಒಮ್ಮೆ ಡಿಕೆಶಿ ಸಿಎಂ ಆಗೋದು ನಿಶ್ಚಿತ. ಹತ್ತು ವರ್ಷಗಳ ನಡುವೆ ಒಮ್ಮೆ ಐದು ವರ್ಷ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.