ಪ್ರಧಾನಿ ನರೇಂದ್ರ ಮೋದಿ ಪರ ಮಾಜಿ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್…!

ರಾಜ್ಯದಲ್ಲಿ ನೆರೆ ವಿಚಾರಕ್ಕೆ ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಪರ  ಬ್ಯಾಟಿಂಗ್ ಮಾಡಿದ್ದಾರೆ.

ಕೊಡಗಿನಲ್ಲಿ ನೆರೆ ಬಂದಾಗ ಖುದ್ದು ಪ್ರಧಾನಿ ಮೋದಿ ನನಗೆ ಕರೆ ಮಾಡಿದ್ದರು. ಮೋದಿ ನನ್ನ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಆದರೆ ಈಗ ಅವರ ಪಕ್ಷದ ಸಿಎಂಗೆ ಭೇಟಿ ಸಾಧ್ಯವಾಗುತ್ತಿಲ್ಲ. ಈ ರಾಜ್ಯದ ಸಿಎಂಗೂ ಪ್ರಧಾನಿಗೂ ವಿಶ್ವಾಸದ ಕೊರತೆಯಿದೆ. ಇದು ನನ್ನ ಅಭಿಪ್ರಾಯ. ನಾನು ಸಿಎಂ ಆದಾಗ ಮೋದಿ ಸೂಕ್ತವಾಗಿ ಸ್ಪಂದಿಸಿದ್ದಾರೆ.

ನನಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ನನ್ನ ಮೇಲೆ ಗೂಬೆ ಕೂರಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights