‘ಪ್ರೀತಿ, ವಿಶ್ವಾಸಕ್ಕೆ ನಾನು ಆಭಾರಿ’ ಡಿಕೆ ಶಿವಕುಮಾರ್ ಟ್ವೀಟ್ ಸಾರಾಂಶ

ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳಿಗೆ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ವಂದನೆ ತಿಳಿಸಲಾಗಿದೆ. ಡಿಕೆ ಶಿವಕುಮಾರ್ ಟ್ವೀಟ್ ಸಾರಾಂಶ ಹೀಗೆದೆ.

ಸಮಾಜದ ನಾನಾ ಕ್ಷೇತ್ರಗಳ ಮುಖಂಡರು, ಸ್ನೇಹಿತರು, ಹಿತೈಷಿಗಳು ನನ್ನನ್ನು ಬೆಂಬಲಿಸಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರಾಲಿ ನಡೆಸುತ್ತಿರುವುದನ್ನು ಕೇಳಿ ನನ್ನ ಮನಸ್ಸು ಮತ್ತು ಕಣ್ಣು ತುಂಬಿ ಬಂದಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಆಭಾರಿ.

ಜಾಥಾ, ಸಭೆ ಸಂಪೂರ್ಣ ಶಾಂತಿಯುತವಾಗಿರಲಿ. ಯಾವುದೇ ಕಾರಣಕ್ಕೂ ಶಾಂತಿ ಭಂಗಕ್ಕೆ ಅವಕಾಶ ನೀಡಬೇಡಿ. ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡಬೇಡಿ. ಅವರ ನೆಮ್ಮದಿಗೆ ಭಂಗ ತರಬೇಡಿ. ಈ ಸಂದರ್ಭವನ್ನು ದುರ್ಬಳಕೆ ಮಾಡಿಕೊಳ್ಳಲು ಎದುರಾಳಿಗಳಿಗೆ ಅವಕಾಶ ಮಾಡಿಕೊಡಬೇಡಿ. ಇದು ನನ್ನ ಕಳಕಳಿಯ ಮನವಿ.

ನಾನು ಮತ್ತೊಮ್ಮೆ ಸಾರಿ, ಸಾರಿ ಹೇಳುತ್ತೇನೆ. ನಿಮ್ಮ ಗೌರವ-ಘನತೆಗೆ ಧಕ್ಕೆ ತರುವಂಥ ಯಾವುದೇ ಕೆಲಸವನ್ನು ನಾನು ಮಾಡಿಲ್ಲ, ಮಾಡುವುದೂ ಇಲ್ಲ. ನನ್ನ ಮೇಲೆ ನೀವಿಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಬದ್ಧನಾಗಿದ್ದೇನೆ. ನನಗೆ ದೇವರು, ಈ ನೆಲದ ಕಾನೂನಿನ ಮೇಲೆ ಸಂಪೂರ್ಣ ವಿಶ್ವಾಸವಿದೆ. ಜತೆಗೆ ನಿಮ್ಮ ಹಾರೈಕೆಯೂ ಇದೆ. ಹೀಗಾಗಿ ಈ ಎಲ್ಲ ಸಂಕಷ್ಟಗಳಿಂದ ಪಾರಾಗಿ ಬರುತ್ತೇನೆ. ನಿಮ್ಮ ನಡುವೆ ಇದ್ದುಕೊಂಡೇ ಎಂದಿನಂತೆ ಜನಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights