ಬಿಎಸ್ ಯಡಿಯೂರಪ್ಪ ಓರ್ವ ದುರ್ಬಲ ಮುಖ್ಯಮಂತ್ರಿ : ಸಿದ್ದರಾಮಯ್ಯ ಟೀಕೆ
ಬಿಎಸ್ ಯಡಿಯೂರಪ್ಪ ಓರ್ವ ದುರ್ಬಲ ಮುಖ್ಯಮಂತ್ರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. .
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾನಿಯಿಂದ 37 ಸಾವಿರ ಕೋಟಿ ರೂಪಾಯಿ ನಷ್ಟ ಆಗಿದ್ದು, ಅನುದಾನ ನೀಡಿ ಎಂದು ರಾಜ್ಯ ಸರಕಾರ ಕೇಂದ್ರ ಸರಕಾರದ ಬಳಿ ಮನವಿ ಮಾಡಿದೆ. ಆದರೆ, ಕೇಂದ್ರ ಸರಕಾರ ರಾಜ್ಯ ಸರಕಾರದ ಪ್ರಸ್ತಾವಣೆಯನ್ನು ವಾಪಸ್ ಕಳುಹಿಸಿದೆ. ರಾಜ್ಯದಲ್ಲಿ 25 ಸಂಸದರಿದ್ದಾರೆ. ಅವರಿಗೆ ಜವಾಬ್ದಾರಿ ಇಲ್ಲವೇ? ಎಂದು ಪ್ರಶ್ನಿಸಿದರು.
ಕರ್ನಾಟಕದ ಇತಿಹಾಸದಲ್ಲಿ ಇಂಥ ನೆರೆ ಹಾನಿ ಯಾವತ್ತು ಆಗಿರಲಿಲ್ಲ. ರಾಜ್ಯದ ಪ್ರವಾಹ ಪೀಡಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಬೇಕಿತ್ತು. ಆದರೆ, ಅವರನ್ನು ಕೇಳುವ ಗೋಜಿಗೆ ಯಾರು ಹೋಗುತ್ತಿಲ್ಲ. ಬಿಜೆಪಿ ನಾಯಕರು ಪುಕ್ಕಲರು. ಬಿಎಸ್ವೈ ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ. ಮಂಡ್ಯ ಜಿಲ್ಲೆಯವರು ಗಡುಸಾಗಿ ಇರಬೇಕು. ಆದರೆ, ಮಂಡ್ಯದವರೇ ಆದ ಬಿಎಸ್ವೈ ಗಡಸಲ್ಲ. ಎಂದರು.
ನೆರೆ ಸಂಬಂಧ ಸಚಿವರು, ಸಂಸದರು ಸೇರಿದಂತೆ ಯಾರು ಕೂಡ ಮಾತನಾಡುತ್ತಿಲ್ಲ. ಇಂಥ ಜನದ್ರೋಹಿ ಸರಕಾರ ಹಿಂದೆದೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.