ಮಾಜಿ ಪ್ರಧಾನಿ ಇಂದಿರಾಗಾಂಧಿ 103 ನೇ ದಿನಾಚರಣೆ : ಕಾಂಗ್ರೆಸ್ ನಿಂದ ಅದ್ಧೂರಿ ಆಚರಣೆ
ಮಾಜಿ ಪ್ರಧಾನಿ ಇಂದಿರಾಗಾಂಧಿ 103 ನೇ ದಿನಾಚರಣೆ ಹಿನ್ನೆಲೆ ಇಂದು ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ನಿಂದ ಅದ್ಧೂರಿ ಆಚರಣೆ ಮಾಡಲಾಗುತ್ತಿದೆ.
ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿ.ಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಹಾಗೂ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಭಾಗಿಯಾದರು. ಹನುಮಂತಪ್ಪ ಮೃತದಿಂದ ಒಕ್ಕಲಿಗರ ಕಲ್ಯಾಣ ಮಂಟಪದ ವರೆಗೆ ಮೆರವಣಿಗೆ ಬಳಿಕ ಮಾಜಿ ಸಚಿವ ಡಿಕೆ ಶಿವಕುಮಾರ್ ಶೃಂಗೇರಿಗೆ ಭೇಟಿ ನೀಡಲಿದ್ದಾರೆ.
ಹೈಕೋರ್ಟ್ ಜಾಮೀನಿನಲ್ಲಿ ಬಿಡುಗಡೆಯಾದ ನಂತರ ಮೊದಲ ಬಾರಿಗೆ ಡಿಕೆಶಿ ಶೃಂಗೇರಿಗೆ ಭೇಟಿ ನೀಡಿ ಶೃಂಗೇರಿ ಶಾರದಾಂಭೆ ದರ್ಶನ ಪಡೆಯಲಿದ್ದಾರೆ. ನಂತರ ಜಗದ್ಗುರುಗಳ ಆರ್ಶಿವಾದ ಪಡೆಯಲಿದ್ದಾರೆ. ಶೃಂಗೇರಿ ಭೇಟಿ ವೇಳೆ ಡಿಕೆಶಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಾಥ್ ನೀಡಲಿದ್ದಾರೆ.