ವೈಎಸ್ಆರ್ ಸರ್ಕಾರದ ವಿರುದ್ಧ ಪ್ರತಿಭಟನೆ : ಆಂಧ್ರದ ಮಾಜಿ ಸಿಎಂಗೆ ಗೃಹ ಬಂಧನ…

ರಾಜ್ಯದಲ್ಲಿ ಕಾಂಗ್ರೆಸ್ ಮಾಜಿ ಸಚಿವ ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದ್ದರೆ, ಇತ್ತ ನೆರೆ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಮಾಡಿದ್ದಕ್ಕೆ ಆಂಧ್ರ ಮಾಜಿ ಸಿಎಂ ರನ್ನ ಬಂಧಿಸಲಾಗಿದೆ.

ಹೌದು… ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.

ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಟಿಡಿಪಿ ಮುಖಂಡ ನಾರಾ ಲೋಕೇಶ್ ಅವರನ್ನು ಅರೆಸ್ಟ್ ಮಾಡಲಾಗಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಟಿಡಿಪಿ ‘ಚಲೋ ಅತ್ಮಕೂರು’ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಪೊಲೀಸರ ಸೂಚನೆ ನಡುವೆಯೂ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಲೋಕೇಶ್ ಹಾಗೂಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಂದ್ರಬಾಬು ನಾಯ್ಡು 12 ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಟಿಡಿಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆಗೆ ಕರೆ ನೀಡಲಾಗಿತ್ತು.

ಗುಂಟೂರಿಂದ ಪ್ರತಿಭಟನೆಗೆ ಟಿಡಿಪಿ ಮುಂದಾಗಿದ್ದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರನನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ ಎಂದು ಹೇಳಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights