ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ : ಸ್ಥಳೀಯರಿಂದ ವಿನೂತನ ಪ್ರತಿಭಟನೆ…
ಹದೆಗೆಟ್ಟ ರಸ್ತೆಯಲ್ಲಿ ಭತ್ತ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊಸಳ್ಳಿ ಗ್ರಾಮಸ್ಥರು.
ಹೌದು.. ಹದಗೆಟ್ಟು ಹೋದ ಬೈಪಾಸ್ ರಸ್ತೆಯಲ್ಲಿ ನಿತ್ಯ ಅಪಘಾತಗಳು ನಡೆಯುತ್ತಿರುವ ಹಿನ್ನೆಲೆ ಮುಖ್ಯ ರಸ್ತೆ ಯಲ್ಲಿ ಭತ್ತ ನಾಟಿ ಮಾಡಿದ ಸ್ಥಳೀಯರು ವಿನೂತನ ಪ್ರತಿಭಟನೆ ಮಾಡಲಾಗುತ್ತಿದೆ. ಕೋಟ್ಯಾಂತರ ರೂಪಾಯಿ ಅನುದಾನವಿದ್ದರೂ ಕಾಮಗಾರಿ ಮಾತ್ರ ನಡೆಯುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ನಗರಸಭೆ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತುರ್ತು ಕ್ರಮ ಕೈಗೊಳ್ಳದೇ ಹೋದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟು ನಗರಸಭೆ ಸದಸ್ಯ ಎಫ್ ರಾಘವೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.