ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಗ್ಯಾರೆಂಟಿ – ಸಚಿವ ಕೆ.ಎಸ್.ಈಶ್ವರಪ್ಪ
ಹದಿನೈದು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಸಿಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ರಾಜೀನಾಮೆ ನೀಡಿದ್ದರಿಂದಲೇ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣವಾಯಿತು. ಅವರಿಗೆ ಕೊಟ್ಟಿರುವ ಮಾತಿನಂತೆ ನಡೆದುಕೊಳ್ಳಬೇಕು. 15ಕ್ಕೆ ಹದಿನೈದು ಕ್ಷೇತ್ರಗಳಲ್ಲಿ ಗೆದ್ದರೂ ಎಲ್ಲರನ್ನು ಸಂಪುಟಕ್ಕೆ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದರು.
ಒಂದು ವೇಳೆ ಉಪಚುನಾವಣೆಯಲ್ಲಿ ಸೋತರೆ ಅವರನ್ನು ಮೇಲ್ಮನೆಗೆ ಆಯ್ಕೆ ಮಾಡಿ ಸಚಿವರಾಗಿ ಮಾಡುವ ಬಗ್ಗೆ ಮಾತುಕತೆ ನಡೆದಿಲ್ಲ. ಪರಾಭವಗೊಂಡವರ ಬಗ್ಗೆ ಸ್ಥಾನಮಾನ ಕುರಿತು ಕೇಂದ್ರವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.ಕೆಲವರಿಗೆ ಉಪಚುನಾವಣೆಯಲ್ಲಿ ನಿಲ್ಲುವ ಬದಲು ಮೇಲ್ಮನೆಯಿಂದ ಆಯ್ಕೆ ಮಾಡಿ ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬ ತೀರ್ಮಾನವಾಗಿತ್ತು. ಆದರೆ ಕೆಲವರು ಒಪ್ಪದೆ ಚುನಾವಣೆಗೆ ಸ್ಪರ್ಧಿಸಲು ತೀರ್ಮಾನಿಸಿದರು ಎಂದು ಹೇಳಿದರು.