ಏಕ ಭಾಷೆ ಹಿಂದಿ ಹೇರಿಕೆಯನ್ನು ವಿರೋಧಿಸಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ…
ಏಕ ಭಾಷೆ ಹಿಂದಿ ಹೇರಿಕೆಯನ್ನು ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಆನಂಸರಾವ್ ವೃತ್ತದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ರಿಜ್ವಾನ್ ಅಹಮದ್, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ನವಾಜ್ ಮತ್ತಿತರರು ಹಾಜರಿದ್ದರು.
ಇಡೀ ದೇಶದಲ್ಲಿ ಅವರದೇ ಆದ ಸಂಸ್ಕೃತಿ, ವೈವಿಧ್ಯ ತೆ ಇದೆ. ಎಲ್ಲರಿಗೂಅವರದೇ ಆದ ಭಾಷೆಗಳಿವೆ. ಆದರೆ ಒಂದೇ ಭಾಷೆ. ಒಂದೇ ಧರ್ಮ, ಕುರಿತು ಅಮಿತ್ ಶಾ ಹೇಳಿಕೆ ನೀಡುತ್ತಿರುವುದು ಸರಿಯಲ್ಲ, ನೆಹರು ಸೇರಿದಂತೆ ಕಾಂಗ್ರೆಸ್ ನ ಅನೇಕ ನಾಯಕರು ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ನಡೆಸಿದ್ದಾರೆ. ಪ್ರತ್ಯೇಕ ಕನ್ನಡ ದ್ವಜ ಕುರಿತು ವಿರೋಧಿಸುವುದು ಸರಿಯಲ್ಲ. ಇದನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಲಿದೆ. ದಿನೇಶ್ ಗುಂಡೂರಾವ್ ಹೇಳಿಕೆ.