ಕರ್ನಾಟಕದ ರಾಜ್ಯ ಸಚಿವರ ಮನೆಯನ್ನೂ ಆಕ್ರಮಿಸಿಕೊಂಡ ಕೊರೊನಾ! ಡಿಟೈಲ್ಸ್‌

ಕರ್ನಾಟಕದಲ್ಲಿ ಕೊರೋನಾ ಆಕ್ರಮಣ ಹೆಗ್ಗಿಲ್ಲದೆ ಸಾಗುತ್ತಿದ್ದು, ವೈದ್ಯಕೀಯ ಶಿಕ್ಷಣ ಸಚಿವರ ಮನೆಗೂ ಕೊರೋನಾ ಆತಂಕ ಆವರಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ತಂದೆ ಜ್ವರ ಹಾಗೂ ಕೆಮ್ಮಿನ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ.

ಸಚಿವ ಸುಧಾಕರ್‌ ಈ ಬಗ್ಗೆ ಟ್ವೀಟ್ ಮಾಡಿದ್ದು “ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಸೋಂಕು ದೃಢಪಟ್ಟಿದೆ.” ಎಂದುತಿಳಿಸಿದ್ದಾರೆ.

ಇದಲ್ಲದೆ ಬೆಂಗಳೂರಿನ ಸದಾಶಿವ ನಗರದಲ್ಲಿರೋ ಸುಧಾಕರ್ ನಿವಾಸದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದಾಗಿಯೂ ತಿಳಿಸಿದ್ದಾರೆ.

ಅವರ ಮನೆಯಲ್ಲಿ ಇಬ್ಬರಿಗೆ ಕೊರೊನಾ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಡೆಸಿದ್ದ ಸಭೆಗೆ ಸಚಿವರು ಗೈರಾಗಿದ್ದಾರೆ.

ಈ ಹಿಂದೆಯೂ ಸೋಂಕಿತ ಕ್ಯಾಮರಾಮನ್ ಒಬ್ಬನ ಸಂಪರ್ಕಕ್ಕೆ ಬಂದು ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದ ಸಚಿವರ ಮನೆಗೆಲಸದ ವ್ಯಕ್ತಿಗೆ ಕೊರೋನಾ ಬಂದಿರುವುದು, ಅವರ ತಂದೆಗೆ ಜ್ವರ ಕಾಣಿಸಿಕೊಂಡಿರುವುದು ನಿಜಕ್ಕೂ ಆತಂಕ ಮೂಡಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights