ನಾಡಿನ ಜನತೆಗೆ ಗೌರಿ-ಗಣೇಶ ಹಬ್ಬಕ್ಕೆ ಶುಭಹಾರೈಸಿದ ಸಿಎಂ ಯಡಿಯೂರಪ್ಪ…
ನೆರೆ ಹಾನಿ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ಗೌರಿ, ಗಣೇಶ ಹಬ್ಬದ ಸಂಭ್ರಮ ಕಂಡು ಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಗಣೇಶ ಚತುರ್ಥಿ ಅಂಗವಾಗಿ ಧವಳಗಿರಿಯ ತಮ್ಮ ನಿವಾಸದಲ್ಲಿ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಹಿರಿಯ ಪುತ್ರಿ ಪದ್ಮಾವತಿ ಮತ್ತು ಕುಟುಂಬದ ಸದಸ್ಯರು ಇದ್ದರು. ವಿದ್ಯಾದಾತ ಗಣೇಶನಿಗೆ ಪೂಜೆ ಸಲ್ಲಿಸಿದರು.
ಹಬ್ಬದ ಅಂಗವಾಗಿ ನಾಡಿನ ಜನತೆಗೆ ಒಳಿತಾಗಲಿ ಎಂದು ಸಿಎಂ ಶುಭಹಾರೈಸಿದ್ದಾರೆ.