ಅಂತರ ಜಿಲ್ಲೆಯೊಳಗೆ ಪ್ರಯಾಣಿಸಲು ಪಾಸ್ ಗಳ ಅಗತ್ಯವಿಲ್ಲ – ಡಿಜಿಪಿ
ಲಾಕ್ ಡೌನ್ ಜಾರಿಯಾದಾಗಿನಿಂದಲೂ ವಾಹನ ಸಂಚಾರಕ್ಕೆ ಸಂಪೂರ್ಣ ತಡೆವೊಡ್ಡಲಾಗಿತ್ತು. ಸದ್ಯ ರಾಜ್ಯದಲ್ಲಿ 4.0 ಲಾಕ್ ಡೌನ್ ಜಾರಿಯಲ್ಲಿದ್ದು ಅಂತರ ಜಿಲ್ಲೆಯೊಳಗೆ ಪ್ರಯಾಣಿಸಲು ಸಡಿಲಗೊಳಿಸಲಾಗಿದೆ.
ಹೌದು… ಮೇ 18 ರಿಂದ ಮೇ 30ರವೆರೆಗೂ 4.0 ಲಾಕ್ ಡೌನ್ ಜಾರಿಯಲ್ಲಿದ್ದು, ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ವಾಹನಗಳ ಸಂಚಾರಕ್ಕೆ ಷರತ್ತು ಬದ್ಧ ಸಡಿಲಗೊಳಿಸಲಾಗಿದೆ. ಲಾಕ್ ಡೌನ್ ಆರಂಭದಿಂದಲೂ ಅಂತರ ಜಿಲ್ಲೆಯೊಳಗೆ ಪ್ರಯಾಣಿಸಲು ವಾಹನಗಳಿಗೆ ಅವಕಾಶವಿರಲಿಲ್ಲ. 3.0 ಲಾಖ್ ಡೌನ್ ನಲ್ಲಿ ವಾಹನಗಳ ಸಂಚಾರಕ್ಕೆ ಪಾಸ್ ತೆಗೆದುಕೊಳ್ಳುವ ಕ್ರಮ ಜಾರಿಯಲ್ಲಿತ್ತು. ಸದ್ಯ ಪಾಸ್ ಗಳ ಅವಶ್ಯಕತೆ ಇಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ತಿಳಿಸಿದ್ದಾರೆ.
ಈ ಬಗ್ಗೆ ಡಿಜಿಪಿ ಕರ್ನಾಟಕ ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಲಾಗಿದ್ದು ಪ್ರಯಾಣ ಮಾಡುವಾಗ ಅಗತ್ಯ ವಸ್ತುಗಳನ್ನು, ದಾಖಲೆಗಳನ್ನು ಕೊಂಡೊಯ್ಯಿರಿ ಎಂದು ಸೂಚನೆ ನೀಡಿದ್ದಾರೆ.
ಮಾರ್ಚ್ 25ರಿಂದ ಹೊರಡಿಸಲಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರಲಿಲ್ಲ. ನಂತರ ಸ್ವಲ್ಪ ವಿನಾಯ್ತಿ ನೀಡಿ ಪಾಸ್ ಹೊಂದಿರುವವರಿಗೆ ನಿಯಮ ಹೇರಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.