ಅಗಲಿದ ಚೇತನಕ್ಕೆ ಮುಸ್ಲಿಂ ಸಮಾಜದ ಬಾಂಧವರಿಂದ ಸಂತಾಪ…!
ಪೇಜಾವರ ಶ್ರೀಗಳ ನಿಧನಕ್ಕೆ ಗದಗ ಜಿಲ್ಲೆಯ ವಿವಿದೆಡೆ ಸಂತಾಪ ಸಲ್ಲಿಸಲಾಗುತ್ತಿದೆ. ಗದಗ ನಗರದ ಬ್ಯಾಂಕ್ ರಸ್ತೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ಮುಸ್ಲಿಂ ಸಮಾಜದ ಬಾಂಧವರು, ಅಗಲಿದ ಚೇತನಕ್ಕೆ ಸಂತಾಪ ಸೂಚಿಸಿದ್ರು.
ಪೇಜಾವರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಅಲ್ಲದೆ ಪೇಜಾವರ ಶ್ರೀಗಳ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಮುಸ್ಲಿಂ ಸಮಾಜದ ಬಂಧುಗಳು ಪ್ರಾರ್ಥನೆಯನ್ನೂ ಮಾಡಿದ್ರು.
ಈ ವೇಳೆ ಮಾತನಾಡಿದ ಸಮಾಜ ಬಾಂಧವರು, ಪೇಜಾವರ ಶ್ರೀಗಳ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಪಸಂಖ್ಯಾತರು, ದೀನ ದಲಿತರ ಉದ್ಧಾರಕ್ಕಾಗಿ ಶ್ರಮಿಸಿದವರು. ಎಲ್ಲರ ವಿರೋಧದ ನಡುವೆಯೂ ಶ್ರೀಮಠದಲ್ಲಿ ಇಫ್ತಿಯಾರ್ ಕೂಟ ಆಯೋಜನೆ ಮಾಡೋ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ್ದು ಪೇಜಾವರ ಶ್ರೀಗಳು. ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಅಂತ ದೇವರಲ್ಲಿ ಪ್ರಾರ್ಥಿಸಿದ್ರು.