ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ನೀಲಗಿರಿ ಮರ ಕಳ್ಳತನ : ಇಬ್ಬರ ಬಂಧನ…..
ಮಂಡ್ಯದಲ್ಲಿ ಮತ್ತೆ ಮರಗಳ್ಳತನ ಹೆಚ್ಚಾಗುತ್ತಿದೆ. ಇಂದು ಬೆಳಿಗ್ಗೆ ನೆಡುತೋಪಿನಲ್ಲಿ ನೀಲಗಿರಿ ಮರ ಕಡಿದು ಸಾಗಿಸುತ್ತಿದ್ದ ಇಬ್ಬರನ್ನ ಅರಣ್ಯ ಇಲಾಖೆ ಬಂಧಿಸಿದೆ.
ಮಂಡ್ಯ ತಾಲೂಕಿನ ಕೊಡಗಳ್ಳಿ ಗ್ರಾಮದ ಬಳಿ ಅರಣ್ಯದಲ್ಲಿ ಈ ಘಟನೆ ನಡೆದಿದೆ.
ಸರ್ವೆ ನಂ ೩೭ ರ ನೆಡುತೋಪು ಅರಣ್ಯದಲ್ಲಿ ನೂರಾರು ಮರಗಳನ್ನು ಕಡಿದು ಸಾಗಿಸುವಾಗ ಕಳ್ಳರು ಸಿಕ್ಕಿಬಿದ್ದಿದ್ದಾರೆ.
ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ನೆಡುತೋಪಿನ ಮರಗಳನ್ನು ಕಡಿದಿದ್ದ ಸತ್ಯಮತ್ತು ವೇಣು ಸಿಕ್ಕಿ ಬಿದ್ದ ಕಳ್ಳರು. ಇನ್ನುಳಿದ ನಾಲ್ವರು ಸ್ಥಳದಿಂದ ಪರಾರಿಯಾಗಿದ್ದಾರೆ. ಮಂಡ್ಯ ಸಹಾಯಕ ಅರಣ್ಯಾ ಇಲಾಖೆ ಅಧಿಕಾರಿಗಳಿಂದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದ್ದು, ಲಕ್ಷಾಂತರ ರೂ ಮೌಲ್ಯದ ಮರದ ತುಂಡುಗಳನ್ಜು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿದ್ದು, ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.