ಅರಮನೆಗೆ ದಸರಾ ಆರು ಗಜಪಡೆ : ಅದ್ದೂರಿ ಸ್ವಾಗತಕ್ಕೆ ಸಕಲ ಸಿದ್ಧತೆ

ಮೈಸೂರು ದಸರಾ ಅದೆಷ್ಟು ಸುಂದರ… ಈ ಹಾಡು ನೀವೆಲ್ಲಾ ಕೇಳೇ ಇರುತ್ತೀರಾ.. ಈ ಹಾಡು ನೆನೆಪು ಮಾಡಿಕೊಳ್ಳು ದಿನ ಇನ್ನೇನು ದೂರವಿಲ್ಲ.

ಹೌದು.. ದಸರಾ ಹಬ್ಬಕ್ಕೆ ಮೈಸೂರು ಸಜ್ಜುಗೊಳ್ಳುತ್ತಿದೆ.  ಇಂದು ಮೈಸೂರು ಅರಮನೆಗೆ ದಸರಾ ಗಜಪಡೆ ಹೆಜ್ಜೆ ಇಡಲಿದೆ. ಇಂದು ಮೊದಲ ತಂಡದ ಆರು ಆನೆಗಳು ಅರಮನೆಗೆ ಆಗಮಿಸುತ್ತಿದ್ದು, ಜಿಲ್ಲಾಡಳಿತ ಸಾಂಪ್ರದಾಯಿಕವಾಗಿ ಆನೆಗಳನ್ನು ಬರ ಮಾಡಿಕೊಳ್ಳಲಿದೆ. ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನೇತೃತ್ವದಲ್ಲಿ ಗಜಪಡೆಗೆ ಪೂಜೆ ನಡೆಯಲಿದೆ.

ಅರ್ಜುನನ ನೇತೃತ್ವದ ಆನೆಗಳ ತಂಡಕ್ಕೆ ಸಾಂಪ್ರದಾಯಿಕ ಪೂಜೆ ನಡೆಯಲಿದ್ದು, ಇಂದಿನಿಂದ ಒಂದೂವರೆ ತಿಂಗಳ ಕಾಲ ಆನೆಗಳು ಅರಮನೆಯಲ್ಲೇ ಉಳಿಯಲಿದೆ. ಇಂದು ಮಧ್ಯಾಹ್ನ 12ಕ್ಕೆ ಅಭಿಜಿನ್ ಲಗ್ನದಲ್ಲಿ ಗಜಪಡೆಗೆ ಸ್ವಾಗತ ಮಾಡಲಾಗುತ್ತದೆ.

ಕಳೆದ ಗುರುವಾರ ವಿಶ್ವವಿಖ್ಯಾತ ಮೈಸೂರು ದಸರಾ 2019ರ ಗಜಪಯಣಕ್ಕೆ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿ ಅನೆಗಳಿಗೆ ಪೂಜೆ ಮಾಡಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಲಾಗಿತ್ತು. ಈ ಗಜ ಪಡೆಯ ಸ್ವಾಗತಕ್ಕೆ ಡೊಳ್ಳು, ಕಂಸಾಳೆ ವಿವಿಧ ಜನಪದ ಕಲಾ ತಂಡಗಳ ಮೆರುಗು ತುಂಬಿತ್ತು. ಇದರ ಜೊತೆಗೆ ಕಲಶ ಹೊತ್ತು ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದೊಂದಿಗೆ ಅರ್ಜುನ, ವಿಜಯ, ಅಭಿಮನ್ಯು, ವರಲಕ್ಷ್ಮಿ, ಧನಂಜಯ ಮತ್ತು ಈಶ್ವರ ಆನೆಗಳು ಮೈಸೂರಿಗೆ ಪ್ರಯಾಣ ಮಾಡಿತ್ತು.

ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೊದಲ ದಸರಾ ಸಭೆ ನಡೆದಿತ್ತು ಈ ವೇಳೆ ಅವರು ದಸರಾ ಕಾರ್ಯಕಾರಿ ಸಮಿತಿ ಸಭೆ ನಂತರ ದಸರಾ ಮುಹೂರ್ತವನ್ನು ಘೋಷಣೆ ಮಾಡಿದ್ದರು. ಸೆಪ್ಟೆಂಬರ್ 29ರಂದು ಬೆಳಗ್ಗೆ ಸುಮಾರು 9.30ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಮಾಡಲಾಗುತ್ತದೆ. ಚಾಮುಂಡಿಬೆಟ್ಟದ ದೇವಾಲಯದ ಆವರಣದಲ್ಲಿ ಚಾಮುಂಡೇಶ್ವರಿ ಪೂಜೆ ಸಲ್ಲಿಸಿ ದಸರಾ ಉದ್ಘಾಟನೆ ಮಾಡಲಾಗುತ್ತದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights