ಆರೋಪಿ‌ ನಳಿನಿ ಪರ ಬ್ಯಾಟಿಂಗ್ ಮಾಡಿದ್ದ ಸಿದ್ದರಾಮಯ್ಯಗೆ ಬಹಿರಂಗ ಪತ್ರ…

ಫ್ರೀ ಕಾಶ್ಮೀರ ಫಲಕ ಪ್ರದರ್ಶಿಸಿದ ಆರೋಪಿ‌ ನಳಿನಿ ಪರ ಬ್ಯಾಟಿಂಗ್ ಮಾಡಿದ್ದ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆಯಲಾಗಿದೆ.

ಮೈಸೂರಿನ ಹಿರಿಯ ನ್ಯಾಯವಾದಿ ಪಿ ಜಿ ರಾಘವೇಂದ್ರ ಬಹಿರಂಗ ಪತ್ರ ಬರೆದಿದ್ದಾರೆ. ಇವರು ಬರೆದು ಪತ್ರದಲ್ಲಿ ಹೀಗಿದೆ..

ಸಿದ್ದರಾಮಯ್ಯ ಕಾನೂನು ಪದವೀಧರರು. ವಕೀಲರಾಗಿದ್ದವರು ಈಗಲೂ ವಕೀಲರಾಗಿ ಕಾರ್ಯ ನಿರ್ವಹಿಸಬಲ್ಲರು. ಅವರ ಹೇಳಿಕೆಯನ್ನು ಮಾಧ್ಯಮದ ಮುಂದೆ ಹೇಳುವ ಬದಲು. ಅವರೇ ಕರಿಕೋಟು ಧರಿಸಿ ಆಪಾದಿತೆ ನಳಿನ ಪರ ವಕಾಲತ್ತು ವಹಿಸಲಿ.

ಆಕೆಯ ವಿರುದ್ದ ಪ್ರಕರಣ ರದ್ದುಗೊಳಿಸುವಂತೆ ವಾದ ಮಂಡಿಸಿ. ಪ್ರಕರಣ ದಾಖಲಿಸಿದ ಪೊಲೀಸರು ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿ. ಆ ದಂಡದ ಮೊತ್ತವನ್ನು ಪರಿಹಾರ ರೂಪದಲ್ಲಿ ಆಪಾದತೆ ನಳಿನಿಗೆ ಕೊಡಿಸಲಿ. ಸಂವಿಧಾನಬದ್ದವಾಗಿ ಹೋರಾಟ ನಡೆಸಿ ಎಂದು ಮೈಸೂರಿನ ಹಿರಿಯ ನ್ಯಾಯವಾದಿ ಪಿ.ಜೆ.ರಾಘವೇಂದ್ರ ಬಹಿರಂಗ ಆಹ್ವಾನ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights