ಇಂದು ವಿಶ್ವಾಸ ಮತ ಪರೀಕ್ಷೆ ಎದುರಿಸಲಿರುವ ಮಹಾರಾಷ್ಟ್ರ ನೂತನ ಸಿಎಂ ಉದ್ಧವ್ ಠಾಕ್ರೆ….
ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಗಡಿ ಸರ್ಕಾರ ಇಂದು ವಿಶ್ವಾಸ ಮತ ಪರೀಕ್ಷೆ ಎದುರಿಸಬೇಕಿದೆ. ಎಸ್ಸಿಪಿ-ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ನಡೆಸಿರುವ ಶಿವಸೇನೆ ಶನಿವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲಿದೆ.
ಡಿಸೆಂಬರ್ 3 ರೊಳಗೆ ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಬಿ.ಎಸ್ ಕೊಶ್ಯಾರಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರ ಇಂದು ವಿಶ್ವಾಸ ಮತ ಪರೀಕ್ಷೆ ಎದುರಿಸಲಿದೆ. ಈ ವೇಳೆ ಹಂಗಾಮಿ ಸ್ಪೀಕರ್ ಆಗಿ ಎನ್ ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್ ಕಾರ್ಯನಿರ್ವಹಿಸಲಿದ್ದಾರೆ.