ಇಂದು ಶ್ರೀರಂಗಪಟ್ಟಣ ದಸರಾ ಉದ್ಘಾಟನೆ : 3ದಿನಗಳ ಕಾಲ ನಡೆಯಲಿರುವ ದಸರಾ
ಇಂದು ರ್ಮಲಾನಂದ ಶ್ರೀಗಳಿಂದ ಮಂಡ್ಯದ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ ಮಾಡಲಾಯಿತು. ಇಂದಿನಿಂದ 3ದಿನಗಳ ಕಾಲ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಹಬ್ಬಕ್ಕೆ, ಜಂಬು ಸವಾರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಚಾಲನೆ ನೀಡಲಿದ್ದಾರೆ.
ಶ್ರೀರಂಗಪಟ್ಟಣದ ಕಿರಂಗೂರು ಬನ್ನಿ ಮಂಟಪದಿಂದ ಕಿರಂಗೂರು ಬನ್ನಿ ಮಂಟಪದಿಂದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದವರೆಗೆ ದಸರಾ ಜಂಬೂ ಸವಾರಿ ನಡೆಯಲಿದೆ. 250ಕೆಜಿ ತೂಕದ ಮರದ ಅಂಬಾರಿ ಹೊತ್ತು ಹೆಜ್ಜೆ ಹಾಕಲಿರುವ ಅಭಿಮನ್ಯು ಜೊತೆಗೆ ಅಭಿಮನ್ಯುಗೆ ಕಾವೇರಿ, ವಿಜಯ ಆನೆಗಳ ಸಾಥ್ ನೀಡಲಿದ್ದಾರೆ.
ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಮುಂಭಾಗ ಬೃಹತ್ ವೇದಿಕೆ ನಿರ್ಮಾಣಗೊಂಡಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ ಆರಂಭಗೊಂಡಿದೆ. ಮೂಲ ದಸರಾಗೆ ಶ್ರೀರಂಗಪಟ್ಟಣ ಮಧುವಣಗಿತ್ತಿಯಂತೆ ಸಿದ್ಧವಾಗಿದೆ.