ಇ.ಡಿ ಯಿಂದ ಡಿಕೆಶಿ ಬಂಧನ ಹಿನ್ನೆಲೆ : ಕಾಂಗ್ರೆಸ್ ವತಿಯಿಂದ ಪ್ರತಿಭಟನೆ..

ಇ. ಡಿ ಯಿಂದ ಡಿಕೆಶಿ ಬಂಧನ ಹಿನ್ನೆಲೆಯಲ್ಲಿ  ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಮಾಡಲಾಗುತ್ತಿದೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಫ್ರತಿಭಟನೆ ಮಾಡುತ್ತಿದ್ದಾರೆ. ಡಿಕೆಶಿ ಬಂಧಿಸಿರೋ ಇಡಿ ವಿರುದ್ದ ಧಿಕ್ಕಾರ ಕೂಗಿ ಕೈ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ದ್ವೇಷಕ್ಕೆ ಡಿಕೆಶಿ ಬಂಧನ ಮಾಡಿರೋದಾಗಿ ಅಸಮಧಾನಗೊಂಡು ಇಡಿ ಐಟಿ ಸಂಸ್ಥಗಳ ದುಪಯೋಗ ಮಾಡ್ತಿರೋ ಬಿಜೆಪಿ ನಡೆಗೆ ಕಾರ್ಯಕರ್ತರ ಖಂಡಿಸಿದ್ದಾರೆ.

ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ‌್ಯಾಲಿ ಕೈಗೊಂಡು ಪ್ರಧಾನಿ ಮೋದಿ ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್ ಷಾ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಡಿಸಿ ಗೆ ಮನವಿ ಸಲ್ಲಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights