ಈರುಳ್ಳಿ ಹಾರ ಹಾಕಲು ಯತ್ನಿಸಿದ ಮಹಿಳೆ ವಿರುದ್ಧ ಹಲ್ಲೆ ಆರೋಪ ಮಾಡಿದ ಶೋಭಕ್ಕ..!
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆಯನ್ನ ಚಿಕ್ಕಮಗಳೂರಿನ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗದಲ್ಲಿ ಮಾಡಲಾಗುತ್ತಿದ್ದ ವೇಳೆ ಸಂಸದೆ ಶೋಭಾ ಕರಂದ್ಲಾಜೆಗೆ ಈರುಳ್ಳಿ ಹಾರ ಹಾಕಲು ಯತ್ನಿಸಿದ ಮಹಿಳಾ ಕಾಂಗ್ರೆಸ್ ನಾಯಕಿಗೆ ಸಂಸದೆ ಶೋಭಾ ಕರಂದ್ಲಾಜೆ ಯಿಂದ ಹಲ್ಲೆ ಆರೋಪ ಮಾಡಲಾಗಿದೆ.
ರಸ್ತೆಯಲ್ಲೇ ಪಕೋಡ ತಯಾರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಮಹಿಳೆಯರು ಈರುಳ್ಳಿ ಹಾರ ಹಾಕಿಕೊಂಡು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗುತ್ತಿದೆ.
ಬೆಲೆ ಏರಿಕೆ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಶೋಭಾಗೆ ಈರುಳ್ಳಿ ಹಾರ ಹಾಕಲು ಯತ್ನಿಸಿದ ಮಹಿಳೆ ಮೇಲೆ ಶೋಭಾ ಹಲ್ಲೆ ಆರೋಪ ಮಾಡಲಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ನಗೀನಾ ಎಂಬುವವರ ಮೇಲೆ ಹಲ್ಲೆಗೆ ಯತ್ನ ಮಾಡಲಾಗಿದೆ.
ಶೋಭಾ ಕರಂದ್ಲಾಜೆ ಮನವಿ ಸ್ವೀಕರಿಸದೇ ಕಾರ್ ನಲ್ಲಿ ತೆರಳುತ್ತಿದ್ದ ವೇಳೆ ಈರುಳ್ಳಿ ಹಾರ ಹಾಕಲು ಯತ್ನಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮೇಲೆ ಹಲ್ಲೆ ಆರೋಪ ಮಾಡುವುದರೊಂದಿಗೆ ಹಲ್ಲೆ ಮಾಡಲಾಗಿದೆ ಎಂದೇಲಲಾಗುತ್ತಿದೆ.