ಉದ್ಯಮಿ ರಾಹುಲ್ ಬೆನ್ನಿಗೆ ನಿಂತ ಬಯೋಕಾನ್ ಮುಖ್ಯಸ್ಥೆ ಕಿರಣ್ ಶಾ

ಪ್ರಧಾನಿ ಮೋದಿ ಆವರ ಸರಕಾರ ಟೀಕಾಕಾರರನ್ನು ಸಂಶಯದಿಂದ ನೋಡುತ್ತದೆ ಎಂದು ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಆರೋಪಿಸಿದ ಬೆನ್ನಲ್ಲಿಯೇ ಮತ್ತೋರ್ವ ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಈ ಆರೋಪವನ್ನು ಪುನರುಚ್ಚರಿಸಿದ್ದಾರೆ.

ಸರಕಾರದ ತನ್ನ ಟೀಕಾಕಾರರನ್ನು ದೇಶದ್ರೋಹಿಗಳಂತೆ ನೋಡಲಾಗುತ್ತಿದೆ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ತೀರಾ ಗಂಭೀರವಾದ ಆರೋಪ ಮಾಡಿದ್ದಾರೆ. ಇದಕ್ಕೆ ಮುನ್ನ ಕಾರ್ಯಕ್ರಮವೊಂದರಲ್ಲಿ ರಾಹುಲ್ ಬಜಾಜ್ ಸಹ ಕೇಂದ್ರ ಸರಕಾರದ ನೀತಿಗಳನ್ನು ಟೀಕಿಸಿ ಬದುಕುವುದು ಕಷ್ಟ ಎಂಬರ್ಥದಲ್ಲಿ ಮಾತನಾಡಿದ್ದರು.

ದೇಶದ ಖ್ಯಾತ ಉದ್ಯಮಿಗಳ ಈ ಟೀಕೆ ಸಹಜವಾಗಿಯೇ ರಾಝಕೀಯ ವಲಯದಲ್ಲಿ ಸಾಖಷ್ಟು ಸದ್ದು ಮಾಡುತ್ತಿದೆ. ಪ್ರತಿಪಕ್ಷ ಕಾಂಗ್ರೆಸ್ ಇದನ್ನು ಉಲ್ಲೇಖಿಸಿ ಮೋದಿ ಸರಕಾರದ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದೆ. ಸಂಸತ್ತಿನಲ್ಲಿ ಸಹ ಸೋಮವಾರ ಈ ವಿಷಯ ಪ್ರಸ್ತಾಪವಾಯಿತು.

ಇದೇ ವೇಳೆ ಸ್ವಂತ ಅಭಿಪ್ರಾಯಗಳನ್ನು ಸಮುದಾಐದ ಅಭಿಪ್ರಾಯ ಎಂಬಂತೆ ಬಿಂಬಿಸುವುದು ದೇಶದ ಹಿತಾಸಕ್ತಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಹುಲ್ ಬಜಾಜ್ ಅವರಿಗೆ ನೇರವಾಗಿ ಕಿವಿಮಾತು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights