ಉಪಚುನಾವಣೆಯಲ್ಲಿ ನಾನು ಸೋತಿದ್ದೇನೆ, ಹಾಗಂತ ನಾನು ಸತ್ತಿಲ್ಲ – ಹೆಚ್.ವಿಶ್ವನಾಥ್
ನಾನು ಸೋತಿದ್ದೇನೆ. ಹಾಗಂತ ನಾನು ಸತ್ತಿಲ್ಲ. ರಾಜಕೀಯವಾಗಿ, ಸಾರ್ವಜನಿಕವಾಗಿ, ಅಭಿವೃದ್ಧಿ ವಿಚಾರದಲ್ಲಿ ಬದುಕಿದ್ದೇನೆ ಎಂದು ಮೈಸೂರಿನ ಹುಣಸೂರಿನಲ್ಲಿ ಮಾಜಿ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.
ಕೆಲವರು ತಾವು ಬಾರಿ ಸತ್ಯವಂತರು ಅನ್ನೋ ರೀತಿ ಮಾತನಾಡುತ್ತಿದ್ದಾರೆ. ನಾನು ಹಣ ತಿಂದೆ ಅಂತಾ ಅಪಪ್ರಚಾರ ಮಾಡಿದರು. ಆದರೆ, ನಾನು ಹಣ ತಿಂದವನಲ್ಲ ಬೇರೆಯವರಿಗೆ ತಿನ್ನಿಸಿದವನು. ನಾನು ಯಾರ ಅನ್ನಕ್ಕೂ ಕೈ ಹಾಕಿಲ್ಲ. ನಾನೇ ಲಕ್ಷಾಂತರ ಮಕ್ಕಳಿಗೆ ಅನ್ನ ಕೊಡುವ ಯೋಜನೆ ಮಾಡಿದ್ದೇನೆ.
ನನಗೆ ದೊಡ್ಡ ದೂರದರ್ಶಿತ್ವ ಇದೆ ಎಂದು ಹುಣಸೂರು ಉಪಚುನಾವಣೆ ಪರಾಜಿತ ಅಭ್ಯರ್ಥಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.