ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಾಗಕ್ಕೆ ಕೆ.ಜಿ. ಶಾಂತರಾಮ್ ನಿಯೋಜಿಸಿದ ರಾಜ್ಯ ಸರ್ಕಾರ…

ಪ್ರಮಾಣಿಕ ದಕ್ಷ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಜಾಗಕ್ಕೆ ಕೆ.ಜಿ. ಶಾಂತರಾಮ್ ಅವರನ್ನು ನಿಯೋಜಿಸಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಮಿಕರ ಹಿತ ಕಾಯಲು ಹೋಗಿದ್ದ ರೋಹಿಣಿ ಸಿಂಧೂರಿ ಅವರಿಗೆ ಸಿಕ್ಕಿದ್ದು ವರ್ಗಾವಣೆ ಭಾಗ್ಯ.

ಹೌದು.. ಭ್ರಷ್ಟಾಚಾರ ಹತ್ತಿಕ್ಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಂತಹ ರಾಜ್ಯದ ಪ್ರಾಮಾಣಿಕ ದಕ್ಷ ಅಧಿಕಾರಿಗಳಿಗೆ ಪ್ರೋತ್ಸಾಹ ಕಡಿಮೆಯಾಗುತ್ತಿದೆ.  ಈ ವರ್ಗಾವಣೆ ಹಿಂದೆ ಕಾಂಟ್ರಾಕ್ಟರ್ಸ್ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಸ್ಥಾನದಿಂದ ರೋಹಿಣಿ ಸಿಂಧೂರಿ ಅವರನ್ನು ಸದ್ದಿಲ್ಲದೇ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಅಷ್ಟಕ್ಕೂ ರೋಹಿಣಿ ಸಿಂಧೂರಿ ಅವರಿಗೆ ವರ್ಗಾವಣೆ ಭಾಗ್ಯ ಸಿಕ್ಕಿದ್ದು ಯಾಕೆ ಗೊತ್ತಾ..? ಕಾರ್ಮಿಕರ ಕಲ್ಯಾಣ ನಿಧಿಯಲ್ಲಿರು ಸುಮಾರು 7000 ಕೋಟಿ ರು. ಹಣ ಡೈವರ್ಟ್ ಮಾಡಲು ಒಪ್ಪದಕ್ಕೆ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಿಸಲಾಗಿದೆ ಎನ್ನಲಾಗುತ್ತಿದೆ. ಅವಸರವಸರವಾಗಿ ವರ್ಗಾವಣೆ ಮಾಡುವಂತದ್ದು ಏನಿತ್ತು..? ಇದು ಎಷ್ಟು ಸರಿ ಎನ್ನುವ ಅನುಮಾನ ಸದ್ಯ ತಳುಕು ಹಾಕಿಕೊಂಡಿದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights