ಕರ್ನಾಟಕದಲ್ಲಿ ಒಂದೇ ದಿನ 187 ಹೊಸ ಕೊರೊನಾ ಕೇಸ್ – ಉಡುಪಿಗೆ ಬಿಗ್ ಶಾಕ್!

ಕರ್ನಾಟಕದಲ್ಲಿ ಕೊರೊನಾ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡುತ್ತಿದ್ದು ದಿನ ಕಳೆದಂತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಒಂದೇ ದಿನಕ್ಕೆ 187 ಜನರಿಗೆ ಸೋಂಕು ಹರಡಿರುವುದು ದಾಖಲಾಗಿದ್ದು ಈವರೆಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 3,408ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿ ಪ್ರಕಾರ, ಬೆಂಗಳೂರು 28, ಕಲಬುರಗಿ 24, ಮಂಡ್ಯ 15, ಉಡುಪಿ 73, ಹಾಸನ 16, ಬೀದರ್ 2, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ವಿಜಯಪುರ 1, ಬಾಗಲಕೋಟೆ 2, ಬಳ್ಳಾರಿ 3, ಶಿವಮೊಗ್ಗ 9, ಧಾರವಾಡ 2, ಕೋಲಾರ 1, ಹಾವೇರಿ 1 ಮತ್ತು ರಾಮನಗರದಲ್ಲಿ 1 ಪ್ರಕರಣ ಕಂಡು ಬಂದಿದೆ.

ಇಂದು ಕೊರೊನಾ ಸೋಂಕಿತರ ಸಂಖ್ಯೆ ಉಡುಪಿ ಮಂದಿಗೆ ಬಿಗ್ ಶಾಕ್ ನೀಡಿದೆ. ಜಿಲ್ಲೆಯೊಂದರಲ್ಲೇ ಬರೋಬ್ಬರಿ 73 ಮಂದಿಗೆ ಕೊರೊನಾ ವೈರಸ್ ಸೋಂಕು ಅಂಟಿಕೊಂಡಿರುವುದ ಖಾತ್ರಿಯಾಗಿದೆ. ಕೊಂಚ ನೆಮ್ಮದಿಯ ವಿಚಾರ ಅಂದ್ರೆ ಇಂದು 110 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ 3408 ಕೊರೊನಾ ಸೋಂಕಿತರ ಪೈಕಿ 2026 ಸಕ್ರಿಯ ಪ್ರಕರಣಗಳಿವೆ. ಈವರೆಗೆ 52 ಜನ ಕೊರೊನಾಕ್ಕೆ ಬಲಿಯಾಗಿದ್ದಾರೆ.

ಇಂದು ಕೊರೊನಾದಿಂದ ಗುಣಮುಖರಾಗಿ 110 ಮಂದಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 3408 ಕೊರೊನಾ ಸೋಂಕಿತರ ಪೈಕಿ 2026 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ ಕೊರೊನಾದಿಂದ 52 ಮಂದಿ ಸಾವನ್ನಪ್ಪಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights