ಕಲಬುರಗಿ, ಯಾದಗಿರಿ, ಬೀದರ್, ಉಡುಪಿಯಲ್ಲಿ ಕೊರೊನಾ ಸ್ಫೋಟ : ರಾಜ್ಯದಲ್ಲಿಂದು 308 ಕೇಸ್!
ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಒಂದು ನೆಮ್ಮದಿಯ ವಿಚಾರ ಕಿವಿಗೆ ಬಿದ್ದಂತಾಗಿದೆ. ಇಂದು ಹೊಸದಾಗಿ 308 ಕೇಸ್ ದಾಖಲಾಗಿದ್ದು 387 ಜನ ಬಿಡುಗಡೆಗೊಂಡಿದ್ದಾರೆಂದು ವರದಿಯಾಗಿದೆ.
ಆ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,760ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಮೂರು ಮಂದಿ ಮೃತಪಟ್ಟಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ ಒಟ್ಟು 2519 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ರಾಜ್ಯದಲ್ಲಿ 3,175 ಸಕ್ರಿಯ ಪ್ರಕರಣಗಳಿವೆ.
ಕಲಬುರಗಿ, ಯಾದಗಿರಿ, ಬೀದರ್, ಉಡುಪಿಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಕಲಬರುಗಿ 99, ಯಾದಗಿರಿ 66, ಬೀದರ್ 48, ಉಡುಪಿ 45, ಬೆಂಗಳೂರು ನಗರ 48, ಬಳ್ಳಾರಿ 8, ಗದಗ 6, ಶಿವಮೊಗ್ಗ ಮತ್ತು ಧಾರವಾಡ 4, ಹಾಸನ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಕೊಪ್ಪಳ ಮತ್ತು ರಾಮನಗರದಲ್ಲಿ ತಲಾ ಒಂದೊಂದು ಪ್ರಕರಣ ಬಂದಿದೆ. ಇಂದು ಹೊಸದಾಗಿ 308 ಪ್ರಕರಣಗಳ ಬಂದಿದ್ದು, ಇವರಲ್ಲಿ 277 ಮಂದಿ ಸೋಂಕಿತರುಹೊರರಾಜ್ಯದವರಾಗಿದ್ದಾರೆ.