ಕಾಫಿನಾಡ ಮಲೆನಾಡು ಭಾಗದಲ್ಲಿ ಮುಂದುವರೆದ ಮಳೆ : ಜನಜೀವನ ಅಸ್ತವ್ಯಸ್ತ

ಕಾಫಿನಾಡ ಮಲೆನಾಡು ಚಿಕ್ಕಮಗಳೂರು ಭಾಗದಲ್ಲಿ ಮುಂದುವರೆದ ಮಳೆಯಿಂದಾಗಿ ಜನಜೀವನ ಅಸ್ಥವ್ಯಸ್ಥಗೊಂಡಿದೆ.

ಕೊಪ್ಪ, ಎನ್.ಆರ್.ಪುರ. ಶೃಂಗೇರಿ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದ್ದು,  ಮೂಡಿಗೆರೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.  ಮೂಡಿಗೆರೆಯ ಚಾರ್ಮಾಡಿ, ಕೊಟ್ಟಿಗೆಹಾರ, ಆಲೇಖಾನ್ ಹೊರಟ್ಟಿ, ಜಾವಳಿ, ಕಳಸ ಭಾಗದಲ್ಲಿ ಭಾರೀ ಮಳೆಯಿಂದಾಗಿ ಜನ ಚೇತರಿಸಿಕೊಳ್ಳಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.

ಮತ್ತೆ ಬೆಟ್ಡ-ಗುಡ್ಡ ಕುಸಿಯುವ ಭೀತಿಯಲ್ಲಿ ಮಲೆನಾಡಿಗರು ಜೀವ ಗಟ್ಟಿ ಹಿಡಿದುಕೊಂಡು ಜೀವನ ಮಾಡುತ್ತಿದ್ದಾರೆ. ಎತ್ತರದ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯಲ್ಲಾಗುತ್ತಿದೆ.  ಧಾರಾಕಾರ ಮಳೆಯಿಂದ ನದಿ ನೀರಿನ ಹರಿವಿನ ಪ್ರಮಾಣದಲ್ಲೂ ಹೆಚ್ಚಳವಾಗುತ್ತಿದೆ. ಹೀಗಾಗಿ ಮಲೆನಾಡಂದ್ರೆ ಮಲೆನಾಡಿಗರಿಗೆ ಭಯವಾಗಿ ಹೋಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights