ಕಾರು ಮತ್ತು ಟವೆರಾ ನಡುವೆ ಭೀಕರ ಅಪಘಾತ : 13 ಜನ ಸ್ಥಳದಲ್ಲೇ ಸಾವು..!
ಕಾರು ಮತ್ತು ಟವೆರಾ ಅಪಘಾತಕ್ಕೀಡಾಗಿ 13 ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಕುನಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಬಾಲಕನ ನಿಯಂತ್ರಣ ತಪ್ಪಿ ಸರೋವರದ ಬಳಿ ರಸ್ತೆ ತಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪಲ್ಟಿಯಾದ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿಯಾಗಿದೆ. ಪರಿಣಾಮ ಎರಡೂ ಕಾರುಗಳಲ್ಲಿದ್ದ 13 ಮಂದಿ ದುರಂತ ಸಾವನ್ನಪ್ಪಿದ್ದಾರೆ. ಟವೆರಾದಲ್ಲಿ 9 ಜನರು ಮತ್ತು ಕಾರಿನಲ್ಲಿದ್ದ ಇತರ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ತಮಿಳುನಾಡು ಮೂಲದ ಮಂಜುನಾಥ್ , ತನುಜಾ, ಒಂದು ವರ್ಷದ ಹೆಣ್ಣು ಮಗು, ಗೌರಮ್ಮ , ರತ್ನಮ್ಮ, ರಾಜೇಂದ್ರ, ಸುಂದರ್ ರಾಜ್ , ಸರಳ , ಪ್ರಶನ್ಯಾ ಎಂದು ಗುರುತಿಸಲಾಗಿದೆ. ಇವರು ಟವೇರಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ. ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರಿನಲ್ಲಿ ತಮಿಳುನಾಡು ಮೂಲದವರಿದ್ದು, ಅವರು ಧರ್ಮಸ್ಥಳದಿಂದ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಎದುರಿನಿಂದ ವೇಗವಾಗಿ ಬಂದ ಕಾರಿನಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರಿದ್ದರು ಎಂದು ತಿಳಿದು ಬಂದಿದೆ.