ಕಾರ್ ಗೆ ಡಿಕ್ಕಿ ಹೊಡೆದ ಕೇರಳ ಸರ್ಕಾರಿ ಸಾರಿಗೆ ಬಸ್ : 3 ಮಂದಿ ಪ್ರಯಾಣಿಕರ ಸಾವು…
ಕಾರ್ ಗೆ ಕೇರಳ ಸರ್ಕಾರಿ ಸಾರಿಗೆ ಬಸ್ ಡಿಕ್ಕಿ ಹೊಡೆದು 3 ಮಂದಿ ಸಾವನ್ನಪ್ಪಿದ ಘಟನೆ ಜಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿ ನಡೆದಿದೆ.
ನಿನ್ನೆ ಸುಮಾರು 6.00 ಗಂಟೆಗೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಜಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎ-22-ಎನ್-7974 ನೊಂದಣಿ ಸಂಖ್ಯೆಯ ಇನ್ನೋವಾ ಕಾರು ಮತ್ತು ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕೆಎಲ್-15-ಎ- 1747 ನೊಂದಣಿ ಸಂಖ್ಯೆಯ ಕೇರಳ ಸರ್ಕಾರಿ ಸಾರಿಗೆ ಬಸ್ ಮಧ್ಯೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 06 ಪ್ರಯಾಣಿಕರ ಪೈಕಿ ಪುತ್ತೂರು ಕೆಮ್ಮಿಂಜೆ ನಿವಾಸಿಗಳಾದ 1.ಮಹಮ್ಮದ್ ಸಾಧಿಕ್(31) 2.ಮಜೀದ್ ಎಂ (33) ಹಾಗೂ 3.ಸುನೈನಾ (16) ಎಂಬವರುಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಮೃತಪಟ್ಟಿರುತ್ತಾರೆ.
ಕಾರಿನಲ್ಲಿದ್ದ ಉಳಿದ ಪ್ರಯಾಣಿಕರು ಸುಳ್ಯ ಕೆ.ವಿ.ಜಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪುತ್ತೂರು ಕೆಮ್ಮಿಂಜೆ ನಿವಾಸಿ ಮಹಮ್ಮದ್ ಆಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ.