ಕಿರುಕುಳದಿಂದಾಗಿ ಉದ್ಯಮಿ ವಿ.ಜಿ.ಸಿದ್ಧಾರ್ಥ ಆತ್ಮಹತ್ಯೆ : ಹೊಸ ಬಾಂಬ್ ಸಿಡಿಸಿದ ಡಿಕೆಶಿ
ಕಿರುಕುಳದಿಂದಾಗಿ ಕೆಫೆ ಕಾಫಿ ಡೇ ಸಂಸ್ಥಾಪಕ ಉದ್ಯಮಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಎಸ್… ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಕಿರುಕುಳ ಮತ್ತು ಮಾನಸಿಕ ಹಿಂಸೆ ಸಹಿಸಿಕೊಳ್ಳಲಾಗದೆ ಕೆಫೆ ಕಾಫಿ ಡೇ ಸಂಸ್ಥಾಪಕ ಉದ್ಯಮಿ ವಿ.ಜಿ.ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮುಂದೆಯಾದರೂ ಉದ್ಯಮಿಗಳಿಗೆ ವಿನಾ ಕಾರಣ ತೊಂದರೆ ನೀಡದಿರುವಂತೆ ಕೇಂದ್ರ ಸರ್ಕಾರಕ್ಕೆ ಭಗವಂತ ಸದ್ಬುದ್ದಿ ನೀಡಲಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಲೆನಾಡಿನ ಸಂಘ ಸಂಸ್ಥೆಗಳ ಒಕ್ಕೂಟ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ವಿ.ಜೆ.ಸಿದ್ಧಾರ್ಥ ಹೆಗ್ಡೆ ಅವರಿಗೆ ನುಡಿ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೇಂದ್ರ ಸರ್ಕಾರದ ಅಧೀನಲ್ಲಿರುವ ಸಂಸ್ಥೆಗಳು ನೀಡುವ ಕಿರುಕುಳದಿಂದಾಗಿ ನಮ್ಮ ದೇಶ ಒಬ್ಬ ಅತ್ಯತ್ತಮ ಉದ್ಯಮಿಯನ್ನು ಕಳೆದುಕೊಂಡಂತಾಗಿದೆ. ಇನ್ನು ಮುಂದೆಯಾದರೂ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವವರಿಗೆ ತೊಂದರೆ ನೀಡುವುದನ್ನು ಕಡಿಮೆ ಮಾಡಲಿ ಎಂದರು.
ಸದ್ಯ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.