ಕುಡಿಯಲು ಮದ್ಯ ಸಿಗದೆ ಕತ್ತು ಕೊಯ್ದುಕೊಂಡ ವ್ಯಕ್ತಿ
ಕುಡಿಯಲು ಮದ್ಯ ಸಿಗುತ್ತಲ್ಲ ಎಂಬ ಕಾರಣಕ್ಕೆ ಮಾನಸಿಕ ಕಿರಿಕಿರಿಗೆ ಒಳಗಾಗಿ ಕಸಿವಿಸಿ ಕೊಂಡಿರುವ ವ್ತಕ್ತಿಯೊಬ್ಬ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಮಕೂರು ಜಿಲ್ಲೆ, ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಧುಗಿರಿ ತಾಲ್ಲೂಕಿನ ಚಿಕ್ಕದಾಳವಟ್ಟ ಗ್ರಾಮದ ಹನಮಂತಪ್ಪ ಎಂಬಾತ ಮದ್ಯಪಾನದ ವ್ಯಸನಿಯಾಗಿದ್ದು, ಲಾಕ್ಡೌನ್ನಿಂದಾಗಿ ಸುತ್ತಮುತ್ತಲ ಹಳ್ಳಿಗಳಲ್ಲೂ ಮದ್ಯ ಸಿಗದೆ ಕುತ್ತಿಗೆ ಕೊಯ್ದುಕೊಂಡಿದ್ದಾರೆ. ತೀವ್ರ ರಕ್ತ ಸ್ರಾವವಾಗುತ್ತಿದ್ದು, ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಆತ್ಮಹತ್ಯೆ..
ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮದ್ಯ ಸಿಗದ ಕಾರಣ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ಯ ಸಿಗದ ಕಾರಣ ಜಿಗುಪ್ಸೆಗೊಂಡ ಇಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಓರ್ವ ಮೇಲ್ಛಾವಣಿಗೆ ನೇಣು ಬಿಗಿದುಕೊಂಡಿದ್ರೆ, ಮತ್ತೋರ್ವ ಮರಕ್ಕೆ ನೇಣು ಬಿಗಿಸುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.